ಬಳಂಜ: ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

0


ಬಳಂಜ: ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಹಗಲು ರಾತ್ರಿ ಎನ್ನದೆ ದುಡಿದ ಬಳಂಜ, ನಾಲ್ಕೂರು, ತೆಂಕಕಾರಂದುರು ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಪಕ್ಷದ ಹಿರಿಯ ನಾಯಕ ತಾ. ಪ. ಮಾಜಿ ಸದಸ್ಯ ಹೆಚ್. ಧರ್ಣಪ್ಪ ಪೂಜಾರಿ ಆಯೋಜಿಸಿದ್ದರು.

ಈ ಸಭೆಯಲ್ಲಿ ಮಾಜಿ ಶಾಸಕ ಕೆ.ವಸಂತ ಬಂಗೇರ, ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ರಕ್ಷಿತ್ ಶಿವರಾಂ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಶೈಲೇಶ್ ಕುಮಾರ್, ಸುಭಾಸ್ ರೈ , ಪ್ರಶಾಂತ್ ವೇಗಸ್ , ಅಳದಂಗಡಿ ಸಹಕಾರ ಸಂಘದ ನಿರ್ದೇಶಕ ಜಿನ್ನಪ್ಪ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರವೀಂದ್ರ ಬಿ. ಆಮೀನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಾಹಿತಿ ಚಂದ್ರಹಾಸ್ ಬಳಂಜ ಕಾರ್ಯಕ್ರಮ ನಿರೂಪಿಸಿದರು. ಹೆಚ್ಚಿನ ಕಾರ್ಯಕರ್ತರುಸಂಖ್ಯೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here