ಕಲ್ಲೇರಿಯಲ್ಲಿ ಜುಗಾರಿ ಆಟ: ಐವರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

0

ಬೆಳ್ತಂಗಡಿ: ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿಯ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಎಲೆಗಳನ್ನು ಉಪಯೋಗಿಸಿ ಹಣವನ್ನು ಪಣವಾಗಿಟ್ಟು ಉಲಾಯಿ-ಪಿದಾಯಿ ಜುಗಾರಿ ಆಟ‌ ಆಡುತ್ತಿದ್ದಾಗ ದಾಳಿ ನಡೆಸಿದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಸ್.ಐ.‌ರಾಜೇಶ್.ಕೆ.ವಿ ಹಾಗೂ ಸಿಬ್ಬಂದಿಗಳ ತಂಡ ಕೆ.ಶೇಖರ (46 ವ), ಎಸ್. ಮುಸ್ತಾಫ(34 ವ), ಶ್ರೀನಾಥ(30 ವ), ಕೆ. ರಮೇಶ(48 ವ) ಮತ್ತು ಎಂ.ಎ. ಅಬ್ದುಲ್ ಲತೀಫ್(47ವ) ಎಂಬವರನ್ನು ವಶಕ್ಕೆ ಪಡೆದು ಕೃತ್ಯಕ್ಕೆ ಉಪಯೋಗಿಸಿದ ಇಸ್ಪೀಟ್ ಎಲೆಗಳನ್ನು ಹಾಗೂ ಇತರೆ ಸೊತ್ತುಗಳನ್ನು ಹಾಗೂ ರೂ 6680/- ನಗದು ಹಣವನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 93/2023 ಕಲಂ:87 ಕೆ.ಪಿ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here