ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ- ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

0

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷ ದ ಸೋಲಿಗೆ ಕಾರಣಗಳ ಕುರಿತು ಪರಾಮರ್ಶೆ ಸಭೆ ಜು.14 ಬೆಳ್ತಂಗಡಿ ಮೂರು ಮಾರ್ಗದ ಬಳಿ ಇರುವ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದಿದ್ದು ಸಭೆಯಲ್ಲಿಯೇ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದಿದೆ.

ಪಕ್ಷದ ಸೋಲಿಗೆ ಕಾರಣರಾದವರ ವಿವರಗಳನ್ನು ಮತ್ತು ಅಭಿಪ್ರಾಯವನ್ನು ತಿಳಿಸುವ ನಿಟ್ಟಿನಲ್ಲಿ ಸಭೆ ಮಾಡಲಾಗಿತ್ತು , ರಕ್ಷಿತ್ ಶಿವರಾಂ ಬಣ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ಮಾತಿನ ಚಕಮಕಿ‌ ನಡೆದಿದೆ.

ಸತ್ಯಶೋಧನಾ ಸಮಿತಿಯ ಅಧ್ಯಕ್ಷ ಇಬ್ರಾಹಿಂರವರು ಸಭೆ ನಡೆಸುತ್ತಿದ್ದ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ರಂಜನ್ ಜಿ ಗೌಡ,ಶೈಲೇಶ್ ಕುಮಾರ್, ಕೆಪಿಸಿಸಿ ಸದಸ್ಯರಾದ ಕೇಶವ್ ಪಿ ಬೆಳಾಲ್, ಯುವ ಮುಖಂಡ ಹರೀಶ್ ಕುಮಾರ್, ಎ ಸಿ ಮ್ಯಾಥ್ಯೂ, ರಾಜಶೇಖರ ಅಜ್ರಿ ಮುಂತಾದವರು ಸಭೆಯಲ್ಲಿದ್ದರು.

ಈ ವೇಳೆ ರಕ್ಷಿತ್ ಶಿವರಾಂ ಬಣದ ಪ್ರವೀಣ್ ಫೆರ್ನಾಂಡೀಸ್, ಸಚಿನ್ ನೂಜೋಡಿ, ನವೀನ್, ರಾಜೇಶ್ ಭಟ್ ಸವಣಾಲು ಮುಂತಾದವರು ಜೋರಾಗಿ ಮಾತಾಡಿದ ವೇಳೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.

ಸ್ಥಳಕ್ಕೆ ಪೋಲಿಸರು ಆಗಮಿಸಿದ್ದಾರೆ.

LEAVE A REPLY

Please enter your comment!
Please enter your name here