Site icon Suddi Belthangady

ಅರಸಿನಮಕ್ಕಿ: ಭಜನಾ ಪರಿಷತ್ ಸಭೆ

ಅರಸಿನಮಕ್ಕಿ: ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ ಅರಸೀನಮಕ್ಕಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರಶೇಖರ ಸಾಲಿಯಾನ್ ಮಾತನಾಡಿ ಕಾರ್ಯಕ್ರಮದ ಉದ್ದೇಶ, ಮೂಲಭೂತ ಸೌಕರ್ಯಗಳ ಬಗ್ಗೆ, ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ಸೇರುವ ಬಗ್ಗೆ, ಸಂಪ್ರದಾಯದಲ್ಲಿ ಭಜನೆಗೆ ಇರುವ ಮಹತ್ವದ ಬಗ್ಗೆ ಸವಿವಾರವಾಗಿ ಮಾಹಿತಿಯನ್ನು ನೀಡಿದರು.

ಭಜನಾ ಪರಿಷತ್ ಕೊಕ್ಕಡ ವಲಯದ ಸಂಯೋಜಕ ಕೃಷ್ಣಪ್ಪ ಮಾತನಾಡಿ ಡಾ.ಹೆಗ್ಗಡೆಯವರಿಗೆ ಭಜನಾ ಮಂಡಳಿಗಳ ಮೇಲೆ ಇರುವ ಅಭಿಮಾನದ ಬಗ್ಗೆ, ವಲಯದಲ್ಲಿ ಮುಂದಿನ ದಿನಗಳಲ್ಲಿ ಭಜನಾ ಮಂಡಳಿಗಳು ಒಗ್ಗಟ್ಟಿನಲ್ಲಿ ಇದ್ದು ಉತ್ತಮವಾಗಿ ಸಂಘಟನೆಯನ್ನು ಮಾಡಿ, ಬೆಳ್ತಂಗಡಿ ತಾಲೂಕಿನಲ್ಲಿ ವಲಯದಲ್ಲಿ ಎಲ್ಲಾ ಭಜನಾ ಮಂಡಳಿಗಳು ಕ್ರಿಯಾಶೀಲಾ ಇರುವ ಹಾಗೆ ನಾವೆಲ್ಲರೂ ಪ್ರಯತ್ನ ಪಡಬೇಕು ಎಂದರು.ವಲಯ ಮೇಲ್ವಿಚಾರಕಿ ಭಾಗೀರಥಿ ವಲಯದ ಎಲ್ಲಾ ಭಜನಾ ಪರಿಷತ್ ನ ಪದಾಧಿಕಾರಿಗಳು ಮತ್ತು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Exit mobile version