ಪಾಲೇದು ಸ.ಹಿ.ಪ್ರಾ.ಶಾಲೆಯ ಕೊಠಡಿ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

0

ತಣ್ಣೀರುಪಂತ: ಪಾಲೇದು ಸರ್ಕಾರಿ ಹಿರಿಯ ಪ್ರಾಥಮಿಕ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ ನಿರ್ಮಾಣದ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜ ಜುಲೈ 16ರಂದು ನೆರವೇರಿಸಿದರು.

ಭರತ್ ಕುಮಾರ್ ಕೇರಿ ಇವರ ಸಹಕಾರದಿಂದ ಸಿ.ಎಸ್.ಆರ್ ನಿಧಿಯಿಂದ 5 ಲಕ್ಷ ರೂಪಾಯಿ ಹಾಗೂ ಪೋಷಕರು, ಹಳೆ ವಿದ್ಯಾರ್ಥಿಗಳು, ಊರಿನವರ ಸಹಕಾರದಿಂದ ಕೊಠಡಿ ನಿರ್ಮಾಣ ನಡೆಯಲಿದೆ.

ಈ ಸಂದರ್ಭದಲ್ಲಿ ತಣ್ಣೀರುಪಂತ ಗ್ರಾ.ಪಂ.ಸದಸ್ಯರಾದ ಅನಿಲ್ ಪಾಲೇದು, ರುಕೇಶ್ ಮುಂದಿಲ, ದಿವ್ಯಾ ಬಾಳಿಂಜ, ಬಾರ್ಯ ಗ್ರಾ.ಪಂ.ಸದಸ್ಯ ವಸಂತ ಬೊಲ್ಡೆಲು, ತಣ್ಣೀರುಪಂತ ಶಕ್ತಿ ಕೇಂದ್ರದ ಅಧ್ಯಕ್ಷ ಮಹೇಶ್ ಕೋಟ್ಯಾನ್ ಜೆಂಕ್ಯಾರ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಪೋಷಕರು, ಊರಿನವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here