ಬಳಂಜ ಬದಿನಡೆ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆ, ತೀರ್ಥಸ್ಥಾನ

0

ಬಳಂಜ: ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿ ನಡೆ ಬಳೆಂಜದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.ಅಲ್ಲದೆ ಪಾಲ್ಗುಣಿ ನದಿಯಲ್ಲಿ ಗಂಗೆ ಪೂಜೆ ಮಾಡಿ ಗಂಗಾದಾನ ಬಿಡಲಾಯಿತು.

ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ರವರ ನೇತೃತ್ವದಲ್ಲಿ ಅನೇಕ ಭಕ್ತರು ಕ್ಷೇತ್ರದ ಪಲ್ಗುಣಿ ನದಿಯಲ್ಲಿ ಸ್ಥಾನ ಮಾಡಿ ಗಂಗಾ ಪೂಜೆ ನೆರವೇರಿಸಿದರು.ನಂತರ ಕ್ಷೇತ್ರದ ದೇವರ ಮಹಾಪೂಜೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.


ಬಳಂಜ ದೇವಸ್ಥಾನದಲ್ಲೂ ಆಟಿ ಅಮಾವಾಸ್ಯೆ: ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಆಟಿ ಅಮಾವಾಸ್ಯೆ ಪ್ರಯುಕ್ತ ಭಕ್ತಾದಿಗಳು ಶಿವನಿಗೆ ರುದ್ರಾಭಿಷೇಕ, ಹಣ್ಣುಕಾಯಿ ಶ್ರೀ ದೇವಿಗೆ ಹೂವಿನ ಪೂಜೆ, ಕುಂಕುಮಾರ್ಚನೆ ಅರ್ಪಿಸಿದರು.

LEAVE A REPLY

Please enter your comment!
Please enter your name here