ಉಜಿರೆ: ದೊಂಪದಪಲ್ಕೆ ದ.ಕ.ಜಿ.ಪ.ಹಿ.ಪ್ರಾ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

0

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ, ಶೌರ್ಯ ಘಟಕ, ಪ್ರಗತಿ ಬಂದು ಒಕ್ಕೂಟ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ದ.ಕ.ಜಿ.ಪ.ಹಿ.ಪ್ರಾ ಶಾಲೆ ದೊಂಪದಪಲ್ಕೆಯಲ್ಲಿ ಹಣ್ಣಿನ ಗಿಡಗಳನ್ನು ನಾಟಿ ಮಾಡಲಾಯಿತು.

ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯರು ಸುರೇಶ್,ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಶಿಕಲಾ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುರೇಶ್, ಒಕ್ಕೂಟದ ಅಧ್ಯಕ್ಷರಾದ ಲೀಲಾವತಿ, ವಲಯ ಮೇಲ್ವಿಚಾರಕರಾದ ವನಿತಾ, ಸೇವಾ ಪ್ರತಿನಿಧಿ ಶ್ರೀಮತಿ ಪ್ರೇಮಲತಾ,”ಶೌರ್ಯ” ಘಟಕದ ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದು ಗಿಡನಾಟಿಯನ್ನು ಮಾಡಿದರು.

LEAVE A REPLY

Please enter your comment!
Please enter your name here