Site icon Suddi Belthangady

ದ.ಕ, ಉಡುಪಿ ವಕೀಲರ ವೇದಿಕೆಯ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಪರಾಗ್ ಹೊಟೇಲಿನಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಅಧ್ಯಕ್ಷರಾಗಿ ಪ್ರವೀಣ್ ಮುಗುಳಿ ವಿಟ್ಲ, ಕಾರ್ಯದರ್ಶಿಯಾಗಿ ಶೈಲ ರಮೇಶ್ ಬೆಳ್ತಂಗಡಿ, ಖಜಾಂಜಿಯಾಗಿ ಮೋಹಿತ್ ಕುಮಾರ್ ಗೌಡ ಕೊಳ್ತಿಗೆ ಪುತ್ತೂರು, ಉಪಾಧ್ಯಕ್ಷರಾಗಿ ಸಂಧ್ಯಾ ಪ್ರಭು ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ನವೀನ್ ಪದ್ಯಾಣ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಶೈಲಾ ರಮೇಶ್ ಅವರು ಮೂಲತಃ ಮಂಗಳೂರು ಉಳ್ಳಾಲದ ಸೋಮೇಶ್ವರ ನಿವಾಸಿಯಾಗಿದ್ದು ಪ್ರಸ್ತುತ ಬೆಳ್ತಂಗಡಿ ತಾಲೂಕಿನ ನಾವೂರು ಇಂಚರ ನಿವಾಸಿ ನಿವಾಸಿಯಾಗಿದ್ದಾರೆ.ಎಸ್‌ಡಿಎಂ ಲಾ ಕಾಲೇಜ್‌ನ ಹಳೆ ವಿದ್ಯಾರ್ಥಿನಿಯಾಗಿರುವ ಇವರು ಬೆಂಗಳೂರಿನಲ್ಲಿ ಹೈಕೋರ್ಟ್ ವಕೀಲರಾಗಿದ್ದು ಬೆಂಗಳೂರಿನಲ್ಲಿಯೇ ನೆಲೆಸಿದ್ದಾರೆ.

Exit mobile version