Site icon Suddi Belthangady

ಕೊಕ್ಕಡ: ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

ಕೊಕ್ಕಡ: ಕಪಿಲಾ ಜೇಸಿಗೆ ಜುಲೈ 16 ರಂದು ವಲಯ 15 ಪ್ರಾಂತ್ಯ ಸಿ.ಇದರ ಉಪಾಧ್ಯಕ್ಷರ ಅಧಿಕ್ರತ ಭೇಟಿ ಕಾರ್ಯಕ್ರಮ ನಡೆಯಿತು.

ವಲಯ ಉಪಾಧ್ಯಕ್ಷ ಭರತ್ ಶೆಟ್ಟಿ, ಎಲ್.ಎ.ವಿ.ತರಬೇತಿ ನೀಡಿದರು.

ಕೊಕ್ಕಡ ಕಪಿಲಾ ಜೇಸಿ ಘಟಕಾಧ್ಯಕ್ಷ ಜಿತೇಶ್ ಎಲ್ ಪಿರೇರಾ ಅಧ್ಯಕ್ಷತೆ ವಹಿಸಿದ್ದರು.

ಮಹಿಳಾ ಜೇಸಿ ವಿಭಾಗ ಮುಖ್ಯಸ್ಥೆ ದೀಪಾ ವಿ.ಜೇಸಿ ವಾಣಿ ವಾಚಿಸಿದರು.

ಕೋಶಾಧಿಕಾರಿ ಜಸ್ವಂತ್ ಪಿರೇರಾ ಅತಿಥಿಗಳ ಪರಿಚಯ ಮಾಡಿದರು.

ಇದೇ ವರ್ಷ ಜೆ.ಎಫ್.ಎಂ.ಪುರಸ್ಕಾರ ಗಳಿಸಿದ ಕೆ.ಶ್ರೀಧರ್ ರಾವ್ ಹಾಗೂ ಹೆಚ್.ಜಿ.ಎಫ್.ಫೆಲೋಶಿಪ್ ಪಡೆದ ಜೆಸಿಂತಾ ಡಿ ಸೋಜ ಅವರಿಗೆ ಪಿನ್ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಜೋಯ್ ಬೊತೇಲೊ ಹಾಗೂ ಪ್ರಕಾಶ್ ಬೊತೇಲೊ ಅವರನ್ನು ಜೇಸಿಯ ಪ್ರಮಾಣ ವಚನ ನೀಡಿ ಜೇಸಿ ಅಧಿಕಾರಿಗಳು ಸ್ವಾಗತಿಸಿದರು.

ಜಸ್ವಂತ್, ಶ್ರೀಧರ್ ರಾವ್ ಹಾಗೂ ಜೋಯಿ ತರಬೇತಿ ಕುರಿತು ತಮ್ಮ ಅನಿಸಿಕೆಗಳನ್ನು ತಿಳಿಸಿದರು. ಜೋಸೆಫ್ ಪಿರೇರಾ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು.
ಕಾರ್ಯದರ್ಶಿ ವಿಕ್ಟರ್ ಸುವಾರಿಸ್ ವಂದಿಸಿದರು.

Exit mobile version