ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

0

ಬೆಳ್ತಂಗಡಿ: ಸೇವೆ ಎಂಬ ಮನೋಭಾವದ ಶ್ರೀಮಂತಿಕೆಯಿಂದ ಕೆಲಸ ಮಾಡಬೇಕು ಇದಕ್ಕೆ ಸದಸ್ಯರ ಸಹಕಾರ ಅಗತ್ಯ ಸಂಘಟನೆಯ ಕೀರ್ತಿ ಹೆಚ್ಚಲು ಹಿರಿಯರು ಹಾಕಿ ಕೊಟ್ಟ ಅಡಿಪಾಯ ಕಾರಣ ಅವರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲಾ ಅಧ್ಯಕ್ಷ ಆನಂದ ಎನ್ ಬಂಟ್ವಾಳ ಹೇಳಿದರು ಅವರು ಗುರುವಾಯನಕೆರೆ ಛಾಯ ಭವನದಲ್ಲಿ ಜು.16 ರಂದು ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ ಉಡುಪಿ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಬೆಳ್ತಂಗಡಿ ವಲಯದ ಅಧ್ಯಕ್ಷ ಅಶೋಕ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಕೆ ವಸಂತ್ ಶರ್ಮ ಉಜಿರೆ, ಎಸ್ ಕೆ ಪಿ ವಿವಿದ್ದೋದ್ದೇಶ ಸಹಕಾರ ಸಂಘದ ನಿರ್ಧೇಶಕ ವಿಲ್ಸನ್ ಬೆಳ್ತಂಗಡಿ, ಜಿಲ್ಲಾ ಪತ್ರಿಕಾ ಮಾದ್ಯಮ ಪ್ರತಿನಿದಿ ಉಮೇಶ್ ಮದ್ದಡ್ಕ, ವಲಯದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ ಬೆಳ್ತಂಗಡಿ, ಗೌರವಾಧ್ಯಕ್ಷ ಕೆ ಜಿ ಸುಬ್ರಹ್ಮಣ್ಯ ಮಡಂತ್ಯಾರು, ಉಪಾಧ್ಯಕ್ಷೆ ಸಿಲ್ವಿಯ ಬೆಳ್ತಂಗಡಿ, ಕಾರ್ಯದರ್ಶಿ ಹರ್ಷ ಬಳ್ಳಮಂಜ, ಕೋಶಾಧಿಕಾರಿ ಹರೀಶ್ ಕೊಳ್ತಿಗೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲಾ ಉಪಾದ್ಯಕ್ಷ ಲೋಕೇಶ್ ಸುಬ್ರಹ್ಮಣ್ಯ, ಕೋಶಾದಿಕಾರಿ ನವೀನ್ ರೈ ಪುತ್ತೂರು, ಜೊತೆ ಕಾರ್ಯದರ್ಶಿ ಅಜೆಯ್ ಮಂಗಳೂರು, ಸಾಂಸ್ಕ್ರತಿಕ ಕಾರ್ಯದರ್ಶಿ ನವೀನ್ ಕುಮಾರ್ ಕಟೀಲ್, ಕ್ರೀಡಾ ಕಾರ್ಯದರ್ಶಿ ರಾಜೇಶ್ ಉಳ್ಳಾಲ, ಸಂಘಟನಾ ಕಾರ್ಯದರ್ಶಿ ಜಯಕರ್ ಸಾಲಿಯನ್ ಸುರತ್ಕಲ್, ಜಿಲ್ಲಾ ಮಾಜಿ ಕಾರ್ಯದರ್ಶಿ ಹರೀಶ್ ಅಡ್ಯಾರ್ ಆಗಮಿಸಿದ್ದರು.

ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷರುಗಳು ಪಧಾದಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಕಟ್ಟಡ ನಿರ್ಮಾಣಕ್ಕೆ ಧನ ಸಹಾಯ ನೀಡಿದ ಸದಸ್ಯರನ್ನು ಜಿಲ್ಲಾಧ್ಯಕ್ಷರು ಗೌರವಿಸಿದರು.ಈ ಸಂದರ್ಭದಲ್ಲಿ ಮುಂದಿನ 2 ವರ್ಷದ ಅವದಿಗೆ ನೂತನ ಅಧ್ಯಕ್ಷ ಪಧಾದಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ವಲಯದ ಸಾಂಸ್ಕ್ರತಿಕ ಕಾರ್ಯದರ್ಶಿ ಗಣೇಶ್ ನಾರಾವಿ ಪ್ರಾರ್ಥನೆಗೈದರು. ಕಾರ್ಯದರ್ಶಿ ಹರ್ಷ ಬಳ್ಳಮಂಜ ವಾರ್ಷಿಕ ವರದಿ ಮಂಡಸಿದರು. ಕೋಶಾದಿಕಾರಿ ಹರೀಶ್ ಕೊಳ್ತಿಗೆ ಲೆಕ್ಕ ಪತ್ರ ಓದಿದರು.ಜಗದೀಶ್ ಜೈನ್ ದರ್ಮಸ್ಥಳ ಕಾರ್ಯಕ್ರಮ ನಿರೂಪಿಸಿದರು

LEAVE A REPLY

Please enter your comment!
Please enter your name here