Site icon Suddi Belthangady

ಕಕ್ಕಿಂಜೆ: ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

ಕಕ್ಕಿಂಜೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ತಾಲೂಕು ಜನಜಾಗೃತಿ ಸೇವಾ ಸಮಿತಿ ಇದರ ಆಶಯದಲ್ಲಿ ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯಲ್ಲಿ ಜು.15ರಂದು ಸ್ವಾಸ್ತ್ಯ ಸಂಕಲ್ಪ ದಿನಾಚರಣೆ ನಡೆಯಿತು.

ಇದರ ಉದ್ಘಾಟನೆಯನ್ನು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರವಿಕುಮಾರ್ ಇವರು ನೆರವೇರಿಸಿದರು.

ಸಂಪಲ್ಮೂಲ ವ್ಯಕ್ತಿಯಾಗಿ ಜಯರಾಮ ಕೆ.ಮುಂಡಾಜೆ ಇವರು ಮಾಹಿತಿ ನೀಡಿದರು.

ವೇದಿಕೆಯಲ್ಲಿ ನೆರಿಯ ವಲಯದ ಮೇಲ್ವಿಚಾರಕರಾದ ರಾಜೇಶ್ ಹಾಗೂ ಸೇವಾ ಪ್ರತಿನಿಧಿಯಾದ ಅನಿತಾ ಮತ್ತು ಶಶಿಕಲಾ ಜನಜಾಗೃತಿ ವೇದಿಕೆಯ ಗ್ರಾಮ ಸಮಿತಿಯ ಸದಸ್ಯರಾದ ಓಬಯ್ಯ ಗೌಡ ಹಾಗೂ ಶಾಲೆಯ ಎಸ್.ಡಿ.ಎಂ.ಸಿ ಸದಸ್ಯ ಶ್ರೀನಿವಾಸ್ ಕುಲಾಲ್ ಉಪಸ್ಥಿತಿಯಲ್ಲಿ ನಡೆಯಿತು.

Exit mobile version