Site icon Suddi Belthangady

ಮುಂಡಾಜೆ: ಪದವಿ ಪೂರ್ವ ಕಾಲೇಜಿನಲ್ಲಿ ಭಿತ್ತಿಪತ್ರಿಕೆ “ಅಂಕುರಂ” ಬಿಡುಗಡೆ ಕಾರ್ಯಕ್ರಮ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತಕ್ಕೊಳಪಟ್ಟ ಮುಂಡಾಜೆ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಭಿತ್ತಿ ಪತ್ರಿಕೆ ‘”ಅಂಕುರಂ” ಅನ್ನು ಕಾಲೇಜಿನ ಪ್ರಾಂಶುಪಾಲೆ ಜಾಲಿ ಓ ಎ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ “ಈ ಭಿತ್ತಿಪತ್ರಿಕೆಯನ್ನು ಬಹಳ ಸುಂದರವಾಗಿ ಅಚ್ಚುಕಟ್ಟಾಗಿ ರಚಿಸಲಾಗಿದೆ, ಇದು ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಷಯ, ಕಂಪನಿ, ಬ್ಯಾಂಕಿಂಗ್ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾದ ವಿಷಯಗಳನ್ನು ಒಳಗೊಂಡಿರುತ್ತದೆ.ಇದರ ಪ್ರಯೋಜನವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆಯಬೇಕು. ಎಲ್ಲಾ ವಾಣಿಜ್ಯ ವಿದ್ಯಾರ್ಥಿಗಳು ಸೇರಿಕೊಂಡು ಇನ್ನೂ ಉತ್ತಮ ರೀತಿಯಲ್ಲಿ ಭಿತ್ತಿಪತ್ರಿಕೆಯನ್ನು ರಚಿಸಬೇಕು. ವಾಣಿಜ್ಯ ವಿದ್ಯಾರ್ಥಿಗಳಿಗೆ ಬಹಳಷ್ಟು ಉದ್ಯೋಗಾವಕಾಶಗಳಿವೆ ತಾವುಗಳು ಶ್ರಮಪಟ್ಟು ಅಧ್ಯಯನ ಮಾಡಿ ಉತ್ತಮ ಉದ್ಯೋಗಗಳನ್ನು ಪಡೆಯಬೇಕೆಂದು “ಶುಭ ಹಾರೈಸಿದರು.
ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಪದ್ಮನಾಭ ಬಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ ಧನ್ಯವಾದವಿತ್ತರು.

ವೇದಿಕೆಯಲ್ಲಿ ಭಿತ್ತಿಪತ್ರಿಕೆ ಬರಹಗಾರ ಅವಿನಾಶ್, ಯೋಗೀಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕರು ಕಾರ್ಯಕ್ರಮಕ್ಕೆ ಸಹಕರಿಸಿದರು, ಎಲ್ಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

Exit mobile version