ಕನ್ಯಾಡಿ: ಆ.6ರಂದು ಯಕ್ಷಭಾರತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

0

ಕನ್ಯಾಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಯಕ್ಷಭಾರತಿ(ರಿ.)ಸಂಯೋಜನೆಯಲ್ಲಿ ತುಳು ಶಿವಳ್ಳಿ ಸಭಾ(ರಿ). ಬೆಳ್ತಂಗಡಿ, ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರ್ ಬಂಟ್ವಾಳ, ರೋಟರಿ ಕ್ಲಬ್ ಬೆಳ್ತಂಗಡಿ, ಲಯನ್ಸ್ ಕ್ಲಬ್ ಬೆಳ್ತಂಗಡಿ, ಗ್ರಾಮ ಪಂಚಾಯತು ಧರ್ಮಸ್ಥಳ, ಪ್ರಾ.ಕೃ.ಪ.ಸ.ಸಂಘ ನಿ. ಧರ್ಮಸ್ಥಳ, ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ ||, ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿ ಧರ್ಮಸ್ಥಳ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಧರ್ಮಸ್ಥಳ ವಲಯ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಎರ್ಮುಂಜೆ ನಾರ್ಯ ಇವರ ಜಂಟಿ ಸಹಯೋಗದಲ್ಲಿ ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಮತ್ತು ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ಮಂಗಳೂರು ಇವರ ಸಹಕಾರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಆ.6ರಂದು ಆದಿತ್ಯವಾರ ಪೂರ್ವಾಹ್ನ- 9.30ರಿಂದ ಮಧ್ಯಾಹ್ನ 1ಗಂಟೆವರೆಗೆ ಕನ್ಯಾಡಿ ಹರಿಹರಾನುಗ್ರಹ ಸಭಾಭವನದಲ್ಲಿ ನಡೆಯಲಿದೆ.

ಶಿಬಿರದಲ್ಲಿ ವೈದ್ಯಕೀಯ ಶಾಸ್ತ್ರ ವಿಭಾಗ, ಮಕ್ಕಳ ವಿಭಾಗ, ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗ, ಮೂಳೆ ವಿಭಾಗ, ಶಸ್ತ್ರ ಚಿಕಿತ್ಸಾ ವಿಭಾಗ, ಕಿವಿ-ಮೂಗು-ಗಂಟಲು ವಿಭಾಗ, ಕಣ್ಣಿನ ಚಿಕಿತ್ಸಾ ವಿಭಾಗ, ಚರ್ಮ ರೋಗವಿಭಾಗ, ಮಧುಮೇಹ ತಪಾಸಣೆ, ಉಚಿತ ಔಷಧಿಗಳು, ಎಲೆಕ್ಟ್ರೋಕಾರ್ಡಿಯೋಗ್ರಾಮ್(ECG)ವಿಭಾಗಗಳಲ್ಲಿ ತಜ್ಞ ವೈದ್ಯರುಗಳು ಭಾಗವಹಿಸಿ ತಪಾಸಣೆ ಹಾಗು ಚಿಕಿತ್ಸೆ ನೀಡಲಿದ್ದಾರೆ.ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಯಕ್ಷಭಾರತಿ (ರಿ). ಕನ್ಯಾಡಿ ಅಧ್ಯಕ್ಷರು ಹಾಗು ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here