ಉಜಿರೆ: ಜು.30ರಂದು ಸೌತಡ್ಕ ಕ್ಷೇತ್ರದಲ್ಲಿ ಉಚಿತ ಅರೋಗ್ಯ ತಪಾಸಣೆ ಹಾಗು ದಂತ ಚಿಕಿತ್ಸಾ ಶಿಬಿರ

0

ಉಜಿರೆ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಸುಳ್ಯದ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಕೆ.ವಿ.ಜಿ.ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಜು.30ರಂದು ಬೆಳಿಗ್ಗೆ 10ರಿಂದ ಉಚಿತ ಅರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಗಣೇಶ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ.

ಉಚಿತ ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ಜನರಲ್ ಮೆಡಿಸಿನ್ ವಿಭಾಗ, ಶಸ್ತ್ರ ಚಿಕಿತ್ಸಾ ವಿಭಾಗ, ಮಕ್ಕಳ ರೋಗ ವಿಭಾಗ, ಕಿವಿ, ಮೂಗು, ಗಂಟಲು ರೋಗ ವಿಭಾಗ, ನೇತ್ರ ಚಿಕಿತ್ಸಾ ವಿಭಾಗ, ಚರ್ಮ ಮತ್ತು ಲೈಂಗಿಕ ರೋಗ ವಿಭಾಗ, ಸ್ತ್ರೀ ರೋಗ ವಿಭಾಗ, ಎಲುಬು ಮತ್ತು ಕೀಲು ವಿಭಾಗ, ದಂತ ಚಿಕಿತ್ಸಾ ವಿಭಾಗ ಹಾಗು ಆಯುರ್ವೇದ ಮಹಾವಿದ್ಯಾಲಯದ ಸೌಲಭ್ಯಗಳು ದೊರೆಯಲಿವೆ.

ಅಂದು ಬೆಳಿಗ್ಗೆ 10ರೊಳಗೆ ಹೆಸರು ನೋಂದಾಯಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ದಯಾನಂದ ಹೆಗ್ಡೆ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here