Site icon Suddi Belthangady

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಬದಲಾವಣೆ- ನೂತನ ಇಬ್ಬರು ನಾಯಕರ ಆಯ್ಕೆ-ನಗರ ಬ್ಲಾಕ್ ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಬಣ ರಾಜಕೀಯ, ಕಳೆದ ವಾರ ನಡೆದ ಕಾಂಗ್ರೆಸ್ ಪಕ್ಷದ ಗಲಾಟೆ, ಗದ್ದಲ, ವಿಚಾರ ತಿಳಿದ ಬಳಿಕ ಇದೀಗ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಾಯಕರನ್ನು ಬದಲಾಯಿಸಿ ನೂತನ ಇಬ್ಬರು ನಾಯಕರನ್ನು ಬ್ಲಾಕ್ ಅಧ್ಯಕ್ಷರುಗಳನ್ನು ಆಯ್ಕೆ ಮಾಡಲಾಗಿದೆ.


ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಶೈಲೇಶ್ ಕುಮಾರ್ ರವರನ್ನು ಬದಲಾವಣೆ ಮಾಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷ, ಪೆರಾಡಿ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ, ಕಾಶಿಪಟ್ಣ ಗ್ರಾ.ಪಂ ನ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಸತೀಶ್ ಕೆ ಕಾಶಿಪಟ್ಣ ನೇಮಕವಾಗಿದ್ದಾರೆ.ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ರಂಜನ್ ಜಿ ಗೌಡ ಅವರನ್ನು ಬದಲಾವಣೆ ಮಾಡಿ ಲಾಯಿಲ ಸೌಹಾರ್ದ ಕೋ-ಆಪರೆವಟಿವ್ ಸೊಸೈಟಿ (ಲಿ) ಅಧ್ಯಕ್ಷ, ಗುತ್ತಿಗೆದಾರ, ಶ್ರೀ ಸ್ವಾಮಿಪ್ರಸಾದ್ ಅಸೋಸಿಯೇಟ್ಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಅವರನ್ನು ಕೆಪಿಸಿಸಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.


ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಇಬ್ಬರು ಅಧ್ಯಕ್ಷರಿಗೆ ಈಗಾಗಲೇ ಕೆಪಿಸಿಸಿ ಶಿಸ್ತು ಸಮಿತಿಯಿಂದ ನೋಟೀಸ್ ಜಾರಿಯಾಗಿ ಶಿಸ್ತು ಸಮಿತಿಯ ಮಧ್ಯಂತರ ವರದಿ, ಚುನಾವಣಾ ಸಂದರ್ಭದಲ್ಲಿ ನಿಷ್ಕ್ರಿಯರಾದ ಬ್ಲಾಕ್ ಅಧ್ಯಕ್ಷರುಗಳು ಮತ್ತು ಇತ್ತೀಚಿನ ದಿನಗಳಲ್ಲಿ ಪಕ್ಷದ ಶಿಸ್ತು ಮರೆತು ಪಕ್ಷದ ಅಭ್ಯರ್ಥಿಯ ವಿರೋಧವಾಗಿ ಮಾಧ್ಯಮಕ್ಕೆ ಮತ್ತು ಸಭೆಯಲ್ಲಿ ನೀಡಿದ ಬಹಿರಂಗ ಹೇಳಿಕೆಗಳೇ ಈ ಬದಲಾವಣೆಗೆ ಕಾರಣವಾಗಿದೆ.

Exit mobile version