Site icon Suddi Belthangady

ಪಿತಾಂಬರ ಹೇರಾಜೆ ಮತ್ತು ರಕ್ಷಿತ್ ಶಿವರಾಂ ರವರನ್ನು ಭೇಟಿಯಾದ ಅನಿಲ್ ಪ್ರಕಾಶ್ ಡಿಸೋಜಾ

ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತ್ ನ ಉಪಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನಿಲ್ ಪ್ರಕಾಶ್ ಡಿಸೋಜಾ ರವರು ಹಿರಿಯರಾದ ಪಿತಾಂಬರ ಹೇರಾಜೆ
ಮತ್ತು ಬೆಳ್ತಂಗಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿಯಾದರು.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಹಾಜರಿದ್ದು ಪಕ್ಷದ ವತಿಯಿಂದ ಅವರನ್ನು ಗೌರವಿಸಲಾಯಿತು.ಅವರೊಂದಿಗೆ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಹಾಗು ಇತರ ಅಭಿಮಾನಿಗಳು ಹಾಜರಿದ್ದರು.

Exit mobile version