ಸೌಜನ್ಯ ಪ್ರಕರಣದಲ್ಲಿ ನೈಜ ಆರೋಪಿಗಳನ್ನು ಪತ್ತೆ ಮಾಡಿ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಮುಖ್ಯಮಂತ್ರಿಗೆ ಒತ್ತಾಯ

0

ಬೆಳ್ತಂಗಡಿ: 11 ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದ ಪಾಂಗಳ ಚಂದಪ್ಪ ಗೌಡರವರ ಮಗಳು ಕಾಲೇಜು ವಿದ್ಯಾರ್ಥಿನಿ ಕು.ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣ ನಡೆದಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ಪ್ರತಿಭಟನೆ ನಡೆದಿದ್ದು ಆ ಕ್ಷಣದಲ್ಲಿ ಇದರ ಆರೋಪಿಗಳು ಪತ್ತೆಯಾಗಿರಲಿಲ್ಲ.ಆ ನಂತರದಲ್ಲಿ ಈ ಪ್ರಕರಣದ ಆರೋಪಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಶಿಕ್ಷಗೆ ಗುರಿಪಡಿಸುವಂತೆ ಆಗ್ರಹಿಸಿದಾಗ ಸಿ.ಬಿ.ಐ.ಗೆ ಹಸ್ತಾಂತರವಾಗಿ ಅವರು ಸಂತೋಷ್ ರಾವ್‌ನನ್ನು ಆರೋಪಿಯನ್ನಾಗಿಸಿ ನ್ಯಾಯಾಲಯವು ಸದ್ರಿ ಸಂತೋಷ್ ರಾವ್‌ನನ್ನು ನಿರಪರಾಧಿ ಎಂದು ದೋಷಮುಕ್ತಗೊಳಿಸಿದೆ.

ಈ ಬಗ್ಗೆ ಆತಂಕ, ದುಗುಡವಿದ್ದು, ಬಲಿಷ್ಠ, ಪ್ರಬುದ್ಧ ಪೋಲಿಸ್ ಇಲಾಖೆ ನಮ್ಮಲ್ಲಿದ್ದೂ, ಈ ಪ್ರಕರಣವನ್ನು ಭೇದಿಸಲಿಲ್ಲ.ಆ ಕುಟುಂಬಕ್ಕೆ ನ್ಯಾಯ ದೊರೆಯಲಿಲ್ಲ ಎಂದು ಹತಾಶರಾಗಿರುತ್ತಾರೆ. ನೈಜ ಆರೋಪಿಗಳನ್ನು ಪತ್ತೆ ಮಾಡಿ ಶಿಕ್ಷೆಗೆ ಒಳಪಡಿಸದಿದ್ದರೆ ನ್ಯಾಯಾಂಗದ ಬಗ್ಗೆ ನಮ್ಮಲ್ಲಿನ ಭರವಸೆಯೂ ಹುಸಿಯಾಗುತ್ತದಲ್ಲದೆ, ಸಮಾಜದಲ್ಲಿ ಜಾಗೃತಿ ಮೂಡಿಸಿ ಸುಸಂಸ್ಕೃತ ಸಮಾಜವನ್ನು ರೂಪಿಸುವಲ್ಲಿ ನಮ್ಮ ಜವಾಬ್ದಾರಿಯೂ ಇರಬೇಕಾಗಿದ್ದು ಇದನ್ನು ಪುನಃ ತನಿಖೆಗೆ ಒಳಪಡಿಸಿ ಆರೋಪಿಗಳನ್ನು ಪತ್ತೆ ಹಚ್ಚಿ ಸಮಾಜಕ್ಕೆ ಸೂಕ್ತ ಸಂದೇಶ ಈ ಮೂಲಕ ರವಾನೆಯಾಗಬೇಕು.ಆದ್ದರಿಂದ ಈ ಪ್ರಕರಣವನ್ನು ಮರು ತನಿಖೆಗೆ ಆಗ್ರಹಿಸುವಂತೆ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸುತ್ತೇವೆ ಎಂದು ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಕೆ. ಬಾಲಕೃಷ್ಣ ಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here