ಧರ್ಮಸ್ಥಳ: ನಾಳೆ(ಜು.29) ವ್ಯಸನಮುಕ್ತ ಸಾಧಕರ ಸಮಾವೇಶ

0

ಧರ್ಮಸ್ಥಳ: ರಾಜ್ಯಾದ್ಯಂತ ಮದ್ಯ ವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಪಾನಮುಕ್ತರಾದ ನವಜೀವನ ಸದಸ್ಯರ ವ್ಯಸನಮುಕ್ತರ ಸಮಾವೇಶ ಜು.29 ರಂದು ಬೆಳಗ್ಗೆ 11 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಸಭಾ ಭವನದಲ್ಲಿ ನಡೆಯಲಿದೆ.ಸಭಾಪತಿ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸುವರು.ಶಾಸಕ ಹರೀಶ್ ಪೂಂಜ ವ್ಯಸನಮುಕ್ತ ಸಾಧಕರಿಗೆ ಸನ್ಮಾನ ಮಾಡಲಿದ್ದು, ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್ ಗುರುತಿನ ಚೀಟಿ ವಿತರಿಸುವರು.ಪ್ರತಾಪಸಿಂಹ ನಾಯಕ್ ಪ್ರಮಾಣ ಪತ್ರ ವಿತರಿಸುವರು.ಎಸ್‌ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್‌ ಪುಸ್ತಕ ಬಿಡುಗಡೆ ಮಾಡುವರು.ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್‌.ಮಂಜುನಾಥ್ ವಾರ್ಷಿಕ ವರದಿ ಮಂಡಿಸುವರು.ರಾಜ್ಯಾದ್ಯಂತ ನಡೆದ ಮದ್ಯವರ್ಜನ ಶಿಬಿರಗಳ 1,733 ಮಂದಿ ವ್ಯಸನಮುಕ್ತರು ಮತ್ತು ಅವರ ಕುಟುಂಬಸ್ಥರು ಸೇರಿದಂತೆ 2,700 ಮಂದಿ ಈ ಸಮಾವೇಶದಲ್ಲಿ ಭಾಗವಹಿಸುವರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಉಜಿರೆ ಶ್ರೀ ಧ.ಮಂವ್ಯಸನಮುಕ್ತಿ ಮತ್ತು ಸಂಶೋಧನ ಕೇಂದ್ರ ಆಶ್ರಯದಲ್ಲಿ ಸಮಾವೇಶ ಆಯೋಜಿಸಲಾಗಿದೆ.

LEAVE A REPLY

Please enter your comment!
Please enter your name here