ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನ- ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ.2.5 ಲಕ್ಷ ಹಸ್ತಾಂತರ

0

ಮಡಂತ್ಯಾರು: ಮಡಂತ್ಯಾರು ವಲಯದ ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ರೂ.2 ಲಕ್ಷ 50 ಸಾವಿರ ಅನುದಾನದ ಡಿ. ಡಿ. ಯನ್ನು ಉಡುಪಿ ಪ್ರಾದೇಶಿಕ ವಿಭಾಗದ ನಿರ್ದೇಶಕ ದುಗ್ಗೆ ಗೌಡ ರವರು ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಗ್ರಾಮದ ಮೂಲ ಬೂತ ಸೌಕಾರ್ಯ ಅಭಿವೃದ್ಧಿಗೆ ಪೂರಕವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅನುದಾನಗಳನ್ನು ಒದಗಿಸಲಾಗುತ್ತಿದೆ ಇದರ ಸದ್ಬಳಕೆ ಮಾಡಿಕೊಂಡು ಕಾಮಗಾರಿಯನ್ನು ಪೂರ್ಣಗೊಳಿಸುವ ಕುರಿತು ಮಾರ್ಗದರ್ಶನ ನೀಡಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಕಾಂತ್, ಸಮಿತಿಯ ಗೌರಾಧ್ಯಕ್ಷ ಮಾಧವ ಶೆಟ್ಟಿ, ನಾರಾಯಣ ಭಟ್, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ವಸಂತಿ, ತಾಲ್ಲೂಕಿನ ಯೋಜನಾಧಿಕಾರಿ ದಯಾನಂದ ಪೂಜಾರಿ, ವಲಯ ಮೇಲ್ವಿಚಾರಕ ವಸಂತ ಕುಮಾರ್, ಸೇವಾಪ್ರತಿನಿಧಿ ಪರಮೇಶ್ವರ್, ಮಂಜುಳ, ಸಮಿತಿ ಸದಸ್ಯರು, ಸಂಘದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here