Site icon Suddi Belthangady

ಬೆಳ್ತಂಗಡಿ: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಹಿನ್ನಲೆ- ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ

ಬೆಳ್ತಂಗಡಿ: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯ ಹಿನ್ನಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಮಹತ್ವದ ಸಭೆ ನಡೆಯಿತು.ಬೆಳ್ತಂಗಡಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರತಿ ಗ್ರಾಮ ಪಂಚಾಯತ್ ಗಳ ಪಕ್ಷದ ಪ್ರಭಾರಿಗಳು ಭಾಗಿಯಾಗಿದ್ದರು.

ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಾತಿಯಲ್ಲಿ ಯಾವುದೇ ಗೊಂದಲ ಉಂಟಾಗಬಾರದು, ಎಲ್ಲರು ಒಗ್ಗಟ್ಟಿನಿಂದಿರಬೇಕೆಂದು ಚರ್ಚಿಸಿದರು.

ಸಭೆಯಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀನಿವಾಸ ರಾವ್, ಗಣೇಶ್ ಗೌಡ ನಾವೂರು, ಉಪಾಧ್ಯಕ್ಷರುಗಳಾದ ಸೀತಾರಾಮ್ ಬೆಳಾಲ್, ವಸಂತಿ ಮಚ್ಚಿನ, ಮಂಡಲ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ನಂದಕುಮಾರ್, ಸಹಕಾರ ಭಾರತಿಯ ರಾಜೇಶ್ ಪೆರ್ಮುಡ, ಪ್ರಮುಖರುಗಳಾದ ಜಯಾನಂದ್ ಗೌಡ, ಶಶಿಧರ್ ಕಲ್ಮಂಜ ಮುಂತಾದವರು ಭಾಗಿಯಾಗಿದ್ದರು.

Exit mobile version