Site icon Suddi Belthangady

ಧರ್ಮಸ್ಥಳ: ಸೌಜನ್ಯ ಕೇಸ್- ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ, ಅಣ್ಣಪ್ಪನಿಗೆ ವಿಶೇಷ ಪ್ರಾರ್ಥನೆ

ಧರ್ಮಸ್ಥಳ: ನೇತ್ರಾವತಿಯ ಮಣ್ಣಸಂಕ ಬಳಿ 11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು, ದುರುದ್ದೇಶದಿಂದ ಧರ್ಮಸ್ಥಳ ಕ್ಷೇತ್ರ, ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹೆಸರಿಗೆ ಮಸಿಬಳಿಯಲು ಯತ್ನಿಸುತ್ತಿರುವವರಿಗೂ ಶಿಕ್ಷೆ ಕೊಡಬೇಕೆಂದು ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದ ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ, ಕ್ಷೇತ್ರದ ಅಣ್ಣಪ್ಪಸ್ವಾಮಿ ಹಾಗೂ ಹರ್ಪಾಡಿಯ ಕನ್ಯಾಕುಮಾರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಮಂಜುನಾಥ ಸ್ವಾಮಿಯ ದೇವಳದ ಮುಂಭಾಗದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ ಭಕ್ತರು ಮಂಜುನಾಥ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದರು.

ನಂತರ ಅಣ್ಣಪ್ಪ ಸ್ವಾಮಿಯ ಮುಂದೆ ಪ್ರಾರ್ಥಿಸಿ ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಿದರು.ಇಲ್ಲಿಂದ ಮುಂದೆ ಹರ್ಪಾಡಿ ಕನ್ಯಾಕುಮಾರಿಯ ಸನ್ನಿಧಾನದಲ್ಲೂ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

Exit mobile version