Site icon Suddi Belthangady

ವೇಣೂರು: ಟೈಲರ್ಸ್ ಅಸೋಸಿಯೇಷನ್ ವಲಯದ ಮಹಾಸಭೆ

ವೇಣೂರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಷನ್ ವೇಣೂರು ವಲಯ ಸಮಿತಿಯ ಮಹಾಸಭೆ ಗಾರ್ಡನ್ ವ್ಯೂ ಸಭಾ ಭವನದ ಕಾಂಪ್ಲೆಕ್ಸ್ ನಲ್ಲಿ ವಲಯ ಸಮಿತಿಯ ಅಧ್ಯಕ್ಷ ಆನಂದ ಕುಲಾಲ್ ರವರ ಅಧ್ಯಕ್ಷತೆಯಲ್ಲಿ ಜು.29 ರಂದು ಜರಗಿತು.ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕುಶಾಲಪ್ಪ ಗೌಡ ಹಾಗೂ ಜಿಲ್ಲಾ ಸಮಿತಿ ಸದಸ್ಯ ರಾಜು ಪೂಜಾರಿ, ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗೇಶ್ ಆಗಮಿಸಿದ್ದರು. ಈ ಸಭೆಯಲ್ಲಿ ಹಿರಿಯ ವೃತ್ತಿ ಭಾಂದವರಾದ ಶಾಂತಿರಾಜ ಟೈಲರ್ ಕುಂಡದಬೆಟ್ಟು, ಶ್ರೀನಿವಾಸ ಟೈಲರ್ ಪಡ್ಡಂದಡ್ಕ, ಸದಾನಂದ ಟೈಲರ್ ಮೂಡುಕೋಡಿ, ಶೀನ ನಾಯ್ಕ ಕರಿಮಣೇಲು ಇವರುಗಳನ್ನು ಸನ್ಮಾನಿಸಲಾಯಿತು.ಸನ್ಮಾನಿತರ ಪರವಾಗಿ ಶಾಂತಿರಾಜ ಟೈಲರ್ ಇವರು ತಮ್ಮ ಅನಿಸಿಕೆಯನ್ನು ಹೇಳಿದರು.

ಈ ಸಂದರ್ಭದಲ್ಲಿ ಸದಸ್ಯರಿಗೆ ಡಿಜಿಟಲ್ ಐಡಿ ಕಾರ್ಡ್ ಗಳನ್ನು ವಿತರಿಸಲಾಯಿತು ಮತ್ತು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ ಉಮೇಶ್, ಕಾರ್ಯದರ್ಶಿಯಾಗಿ ಸುನಿತಾ, ಕೋಶಾಧಿಕಾರಿಯಾಗಿ ಸುಪ್ರೀತ ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ಇತ್ತೀಚಿಗೆ ನಿಧನ ಹೊಂದಿದ ಕ್ಷೇತ್ರ ಸಮಿತಿ ಸದಸ್ಯರಾದ ಸಂಜೀವ ಟೈಲರ್ ಪಾಣೂರು, ಶಿಲ್ಪಾ ಆಚಾರ್ಯ ಗೋಳಿಯಂಗಡಿ, ರಮೇಶ್ ಆಚಾರ್ಯ ಅಂಡಿಂಜೆ ಇವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಹಾಗೂ ಶಿಲ್ಪ ಆಚಾರ್ಯ ಇವರ ಕುಟುಂಬಕ್ಕೆ ದೇಣಿಗೆ ಸಂಗ್ರಹಿಸಲಾಯಿತು.ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಲಾಯಿತು.ವಲಯದ ಕಾರ್ಯದರ್ಶಿ ಸಹನಾ ಶಾಸ್ತ್ರಿ ಅವರು ವರದಿ ವಾಚಿಸಿ ಕೋಶಾಧಿಕಾರಿ ಪ್ರಮೀಳಾ ಲೆಕ್ಕ ಪತ್ರ ಮಂಡನೆ ಮಾಡಿದರು.

ವಲಯದ ಅಧ್ಯಕ್ಷ ಆನಂದ ಟೈಲರ್ ಸ್ವಾಗತಿಸಿ, ಸುನಿತಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ನಂತರ ಕ್ಷೇತ್ರ ಸಮಿತಿಯ ಮಾಜಿ ಅಧ್ಯಕ್ಷರು ರಾಘವ ಪುತ್ರನ್ ಅನಾರೋಗ್ಯ ಸ್ಥಿತಿಯಲ್ಲಿ ಇರುವವರನ್ನು ವಲಯ ಸಮಿತಿಯ ಪದಾಧಿಕಾರಿಗಳು ಕ್ಷೇತ್ರ ಸಮಿತಿಯ ಪದಾಧಿಕಾರಿಗಳು ಮನೆಗೆ ಹೋಗಿ ಇವರನ್ನು ಸನ್ಮಾನಿಸಲಾಯಿತು.ಆನಂದ ಟೈಲರ್ ಸಾವ್ಯ ಇವರನ್ನು ಕೂಡ ಮನೆಗೆ ಹೋಗಿ ಸನ್ಮಾನಿಸಲಾಯಿತು.

Exit mobile version