ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮೈರಲ್ಕೆಯಲ್ಲಿ ಸರ್ವ ಭಕ್ತರ ಸಭೆ

0

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಸರ್ವ ಭಕ್ತರ ಸಭೆಯು ಜು30 ರಂದು ಆಡಳಿತ ಸಮಿತಿಯ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಅವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ವಠಾರದಲ್ಲಿ ಜರಗಿತು.

ಸಭೆಯಲ್ಲಿ ದೇವಸ್ಥಾನದ ಅಬಿವೃದ್ಧಿಯ ಬಗ್ಗೆ ಹಾಗೂ ದೇವಸ್ಥಾನದಲ್ಲಿ ನಡೆಯುವ ಉತ್ಸವಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಂಬಂದ ಪಟ್ಟ ಉಪ ಸಮಿತಿಗಳನ್ನು ರಚಿಸಲಾಯಿತು.ದೇವಸ್ಥಾನದ ಭಜನಾ ಸಮಿತಿ ಅಧ್ಯಕ್ಷರಾಗಿ ಯೋಗಿಶ್ ಅಡ್ಡಕೊಡಂಗೆ, ಮಹಿಳಾ ಸಮಿತಿ ಅಧ್ಯಕ್ಷೆಯಾಗಿ ಭಾರತಿ ಎಸ್ ಶೆಟ್ಟಿ, ಉತ್ಸವ ಸಮಿತಿ ಅಧ್ಯಕ್ಷರಾಗಿ ನಿತೇಶ್ ಶೆಟ್ಟಿ ಇವರನ್ನು ಅಯ್ಕೆ ಮಾಡಲಾಯಿತು.

ಸಭೆಯಲ್ಲಿ ಆಡಳಿತ ಸಮಿತಿಯ ಎಲ್ಲಾ ಪದಾಧಿಕಾರಿಗಳು ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here