Site icon Suddi Belthangady

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿ ಟಿ.ರವಿಚಂದ್ರ ರಾವ್ ಅಂಗಡಿತೋಟ

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ.ರವಿಚಂದ್ರ ರಾವ್ ಅಂಗಡಿತೋಟ ಆ.1 ರಂದು ಅಧಿಕಾರ ಸ್ವೀಕರಿಸಿದರು.ಇವರು ಸಹಕಾರಿ ಸಂಘಕ್ಕೆ 2000ರಲ್ಲಿ ಗುಮಾಸ್ತರಾಗಿ ಸೇರ್ಪಡೆಗೊಂಡು, 2015 ರಲ್ಲಿ ಉಪ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಭಡ್ತಿಗೊಂಡಿದ್ದರು. ಜು.31 ರಂದು ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿದ್ದ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರು ಸೇವಾ ನಿವೃತ್ತಿ ಹೊಂದಿದ್ದು ಆ.1 ರಿಂದ ಟಿ. ರವಿಚಂದ್ರ ರಾವ್ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಭಡ್ತಿಗೊಂಡಿದ್ದಾರೆ.

Exit mobile version