ಬೆಳ್ತಂಗಡಿ ವಿಮೆನ್ ಇಂಡಿಯಾ ಮ್ಮೂಮೆಂಟ್ (ವಿಮ್) ನೂತನ ಸಮಿತಿ ಅಸ್ತಿತ್ವಕ್ಕೆ

0

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಬೆಳ್ತಂಗಡಿ ತಾಲೂಕು ಪ್ರತಿನಿಧಿ ಸಭೆಯು ಆ.1ರಂದು ಬೆಳ್ತಂಗಡಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ವಿಮೆನ್ ಇಂಡಿಯಾ ಮ್ಮೂಮೆಂಟ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ನೌರಿನಾ ಆಲಂಪಾಡಿ ಉದ್ಘಾಟಿಸಿದರು.

ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಶಮಾ ಆಲಿ ಉಜಿರೆ, ಕಾರ್ಯದರ್ಶಿಗಳಾಗಿ ನಸೀಮಾ ಬೆಳ್ತಂಗಡಿ, ಉಪಾಧ್ಯಕ್ಷರಾಗಿ ತಸ್ಲಿಮಾ ಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಅಶಿಕಾ ಚಾರ್ಮಾಡಿ, ಕೋಶಾಧಿಕಾರಿಯಾಗಿ ಹಸೀನಾ ಬೆಳ್ತಂಗಡಿ ಆಯ್ಕೆಯಾದರು.

ಮರಿಯಮ್ಮ ಬಂಗೇರುಕಟ್ಟೆ, ಸುಮಯ್ಯ ಬಳ್ಳಮಂಜ, ಸೌದ ಬೆಳ್ತಂಗಡಿ, ಅಸ್ಮಾ ಬೆಳ್ತಂಗಡಿ, ಅಝ್ವಿನಾ ಚಾರ್ಮಾಡಿ, ಆಮಿನಾ ಮದ್ದಡ್ಕ, ಮೈಮೂನ ಎಸ್.ಕೆ, ಮಿಶ್ರಿಯಾ ಉಜಿರೆ ಸಮಿತಿ ಸದಸ್ಯರಾಗಿ ಆಯ್ಕೆಯಾದರು.

ಸಭೆಯಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ “ಅನ್ಯಾಯದ ವಿರುದ್ಧ ಒಂದಾಗಿ ಸೆಟೆದು ನಿಲ್ಲಿರಿ” ರಾಷ್ಟ್ರೀಯ ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಶಮಾ ಆಲಿ ಉಜಿರೆ ಸಭೆಯನ್ನುದ್ದೇಶಿಸಿ ಮಾತನಾಡಿದರು ಮತ್ತು ನಸೀಮಾ ಬೆಳ್ತಂಗಡಿ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here