ಬದುಕು ಕಟ್ಟೋಣ ತಂಡದಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಮಿತ್ರ ಉಚಿತ ಕೊಡುಗೆ- ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಗುರುತಿಸುವುದು ನಮ್ಮ ಗುರಿ: ಮೋಹನ್ ಕುಮಾರ್

0

ಬೆಳ್ತಂಗಡಿ: ಪ್ರತಿಯೊಂದು ಕುಟುಂಬದ ಮಕ್ಕಳು ಪ್ರತಿಭಾವಂತರಾಗಿದ್ದು ಅವರಿಗೆ ಭವಿಷ್ಯದ ಬಗ್ಗೆ ಅರಿವಿನ ಬಗ್ಗೆ ಬಾಲ್ಯದಲ್ಲೆ ಮಾಹಿತಿ ನೀಡಿದರೆ ಮುಂದೆ ದೇಶದಲ್ಲೆ ಹೆಸರು ಮಾಡಲು ಸಾದ್ಯ.ಪ್ರಸ್ತುತ ಪತ್ರಿಕೆಗಳು ಮತ್ತು ಚಾನೆಲ್ ಗಳು ಮಕ್ಕಳ ಭವಿಷ್ಯ ರೂಪಿಸುವ ಪಠ್ಯ ಹಾಗೂ ಪಠ್ಯೇತರ ಮಾಹಿತಿಗಳನ್ನು ಒಳಗೊಂಡಿದೆ.ನಮ್ಮ ಬದುಕು ಕಟ್ಟೋಣ ತಂಡ ನೊಂದವರ ಸೇವೆ ಮಾಡುವ ಮೂಲಕ ಪ್ರಾರಂಭವಾಗಿದ್ದು ನಂತರ ಗ್ರಾಮೀಣ ಭಾಗದ ಬಡ ಕುಟುಂಬದ ವಿದ್ಯಾರ್ಥಿಗಳ ನೋವನ್ನು ಅರ್ಥಮಾಡಿಕೊಂಡಿದ್ದೇವೆ.ಮುಂದಿನ ದಿನಗಳಲ್ಲಿ ಸಂಘ-ಸಂಸ್ಥೆಯೊಂದಿಗೆ ಸೇರಿ ಗ್ರಾಮೀಣ ಭಾಗದ ಬಡ ಕುಟುಂಬದ ವಿದ್ಯಾರ್ಥಿಗಳು ದೇಶದಲ್ಲಿ ಗುರುತಿಸುವಂತೆ ಮಾಡುತ್ತೇವೆ ಎಂದು ಬದುಕು ಕಟ್ಟೋಣ ತಂಡದ ಸಂಚಾಲಕ ಕೆ.ಮೋಹನ್ ಕುಮಾರ್ ಹೇಳಿದರು. ಅವರು ಆ.2ರಂದು ವಿಜಯವಾಣಿ ಪತ್ರಿಕೆ, ದಿಗ್ವಿಜಯ ಚಾನೆಲ್ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ, ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢಶಾಲೆ ಮುಂಡಾಜೆ ಇವರ ಸಹಕಾರದಲ್ಲಿ ಬದುಕು ಕಟ್ಟೋಣ ತಂಡ ಉಜಿರೆ ಇವರ ಪ್ರಾಯೋಜಕತ್ವದಲ್ಲಿ ವಿಜಯವಾಣಿ ವಿದ್ಯಾರ್ಥಿ ಮಿತ್ರ ಉಚಿತ ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪ್ರತಿಯೊಬ್ಬರು ಶ್ರಮ ಜೀವಿಗಳಾಗಬೇಕು.ಶ್ರಮದ ಲಾಭದಿಂದ ಒಂದಂಶವನ್ನು ಸಮಾಜಕ್ಕೆ ಮೀಸಲಿಡಬೇಕು ಆಗ ಅತ್ಮ ತೃಪ್ತಿಯೊಂದಿಗೆ ಸಮಾಜದ ಅಬಿವೃದ್ದಿಯನ್ನು ಕಾಣುವ ಸೌಬಾಗ್ಯ ನಮ್ಮದಾಗುತ್ತದೆ.ಬದುಕು ಕಟ್ಟೋಣ ತಂಡದಿಂದ ಗ್ರಾಮೀಣ ಭಾಗದ ಕ್ರೀಡಾ ಸಾಧಕ ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಾಗ್ರಿ ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜೊತೆಗೆ ಎರಡು ಪ್ರತಿಭಾನ್ವಿತ ಅನಾಥ ವಿದ್ಯಾರ್ಥಿಗಳಿಗೆ 8 ಲಕ್ಷ ರೂ ವೆಚ್ಚದ ಮನೆ ನಿರ್ಮಾಣ ಮಾಡುತ್ತಿದ್ದು ಇದನ್ನು ಶೀಘ್ರ ಹಸ್ತಾಂತರಿಸಲಾಗುತ್ತದೆ.ಇಲ್ಲಿನ ಶಾಲೆಯ ಬೇಡಿಕೆಯಂತೆ ದ್ವನಿವರ್ಧಕವನ್ನು ಬದುಕು ಕಟ್ಟೋಣ ತಂಡದಿಂದ ನೀಡಲಾಗುವುದು ಎಂದರು.

ಬೆಳ್ತಂಗಡಿ ರೋಟರಿ ಕ್ಲಬ್ ಅದ್ಯಕ್ಷ ಅನಂತ ಭಟ್ ಮಚ್ಚಿಮಲೆ ಮಾತನಾಡಿ ಶುಭ ಹಾರೈಸಿದರು.ಪತ್ರಕತ ಮನೋಹರ್ ಬಳಂಜ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಶಾಲೆಯ ಅಧ್ಯಕ್ಷ ವಿನಯಚಂದ್ರ ಕೆ ಅದ್ಯಕ್ಷತೆ ವಹಿಸಿದ್ದರು.

ಉದ್ಯಮಿ ಉಜಿರೆ ಅಮೃತ್ ಟೆಕ್ಸ್ ಟೈಲ್ಸ್ ನ ಮಾಲಕ ಪ್ರಶಾಂತ್ ಜೈನ್ ಉಪಸ್ಥಿತರಿದ್ದರು.ಬದುಕು ಕಟ್ಟೋಣ ತಂಡದ ಸದಸ್ಯ ಶಶಿಧರ ಕಲ್ಮಂಜ ಸ್ವಾಗತಿಸಿ ನಿರೂಪಿಸಿದರು.ಶಿಕ್ಷಕ ಸುರೇಶ್ ವಂದಿಸಿದರು.ಮುಖ್ಯೋಪಾಧ್ಯಾಯಿನಿ ಜಯಂತಿ ಟಿ, ಲತೇಶ್ ಶೆಟ್ಟಿ, ಸುಕೇಶ್ ಅಡ್ಕೂರ್, ಗಿರೀಶ್ ಬನ್ನೂರು ಸಹಕರಿಸಿದರು.

LEAVE A REPLY

Please enter your comment!
Please enter your name here