ಕೊಲ್ಲಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ ಹಸ್ತಾಂತರ

0

ಕಿಲ್ಲೂರು: ಜೀರ್ಣೋದ್ಧಾರಗೊಳ್ಳುತ್ತಿರುವ ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನಕ್ಕೆ ಗ್ರಾಮಸ್ಥರ ಹಾಗೂ ಭಕ್ತಾದಿಗಳ ಮನವಿಗೆ ಸ್ಪಂದಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ರೂಪಾಯಿ ಹತ್ತು ಲಕ್ಷಗಳ ದೇಣಿಗೆಯನ್ನು ನೀಡಿ ಆಶೀರ್ವದಿಸಿದರು.

ದೇವಳದ ಆಡಳಿತ ಮಂಡಳಿ, ಜೀರ್ಣೋದ್ದಾರ ಸಮಿತಿ ಪದಾಧಿಕಾರಿಗಳಿಗೆ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ಯೋಜನಾಧಿಕಾರಿ ಸುರೇಂದ್ರ ಕುಮಾರ್ ಇವರು ಕೊಲ್ಲಿ ದೇವಸ್ಥಾನಕ್ಕೆ ಆಗಮಿಸಿ ಹತ್ತು ಲಕ್ಷದ ಡಿ.ಡಿ.ಯನ್ನು ಹಸ್ತಾಂತರಿಸಿರುತ್ತಾರೆ.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ರಾವ್ ಕಕ್ಕೇನೇಜಿ, ಸದಸ್ಯರಾದ ವಿನಯಚಂದ್ರ, ಕೇಶವ ಎಂ., ದಾಸಪ್ಪ ಗೌಡ, ಜ್ಯೋತಿ, ದಿನೇಶ್ ಗೌಡ, ಶ್ರೀಧರ ಪೂಜಾರಿ, ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷ ಬಿ.ಕೆ.ರಾಜಶೇಖರ ರಾವ್, ಸಲಹೆಗಾರ ಬಿ. ಕೆ. ಧನಂಜಯ ರಾವ್, ದೇವಸ್ಥಾನದ ಸಿಬ್ಬಂದಿ ಬಾಲಕೃಷ್ಣ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here