ಇಂದ್ರ ಧನುಷ್ ಲಸಿಕೆ ಹಾಕಿಸಿಕೊಳ್ಳಲು ಮನವಿ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರತರ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮ 2023ರ ಆಗಷ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ನಡೆಯಲಿದೆ. ಮೊದಲನೇ ಸುತ್ತು 07-08-2023 ರಿಂದ 12 ರವರೆಗೆ, ಎರಡನೇ ಸುತ್ತು 11-09-2023ರಿಂದ 16ರವರೆಗೆ ಮೂರನೇ ಸುತ್ತು 09-10-2023ರಿಂದ 14 ರವರೆಗೆ ಜರಗಲಿದೆ. ಆದ್ದರಿಂದ ತಮ್ಮ ಸಮುದಾಯದಲ್ಲಿ ಲಸಿಕೆ ವಂಚಿತ ಮಕ್ಕಳು 0-2 ವರ್ಷದ ಮಕ್ಕಳು, ಗರ್ಭಿಣಿ ಸ್ತ್ರೀಯರಿಗೆ ಮೀಷನ್ ಇಂದ್ರಧನುಷ್ ಕಾರ್ಯಕ್ರಮದಲ್ಲಿ ಲಸಿಕೆ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಕೋರಿಕೊಂಡಿದ್ದಾರೆ, ಆ ಹಿನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ಜುಮ್ಮಾ ನಮಾಝಿನ ನಂತರ ಈ ವಿಷಯವನ್ನು ಪ್ರಚುರ ಪಡಿಸಬೇಕಾಗಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಹಾಜಿ ಬಿ.ಎ. ಅಬ್ದುಲ್ ನಾಸೀರ್ ಲಕ್ಕಿಷ್ಟಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here