ಬೈಕ್ ಅಪಘಾತದಿಂದ ಗಾಯಗೊಂಡಿದ್ದ ಕೇಶವ ಅಚ್ಚಿನಡ್ಕರವರಿಗೆ ಸಹಾಯಧನ ಹಸ್ತಾಂತರ

0

ಬೆಳ್ತಂಗಡಿ: ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಸೇವಾ ಪ್ರತಿನಿಧಿಯಾದ ಕೇಶವ ಅಚ್ಚಿನಡ್ಕ ಇವರು ಕಳೆದ 3 ತಿಂಗಳ‌ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಇದೀಗ ಕೇಶವರವರು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದಾರೆ.

ಕೇಶವರವರನ್ನು ಭೇಟಿ ಮಾಡಿ ಯೋಗಕ್ಷೇಮವನ್ನು ವಿಚಾರಿಸಿ, ಧರ್ಮಾಧಿಕಾರಿಯವರು ಶ್ರೀ ಕ್ಷೇತ್ರದ ಪರವಾಗಿ ಮಂಜೂರು ಮಾಡಿದ ಸಹಾಯಧನದ ಮೊತ್ತ ರೂ.225000/- ನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಯೋಜನಾಧಿಕಾರಿಯಾದ ಸುರೇಂದ್ರ, ಪ್ರಗತಿಬಂಧು ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ ಆರ್, ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ‘ಎ’ ಒಕ್ಕೂಟದ ಅಧ್ಯಕ್ಷ ಶ್ರೀಕೇಶ್ ಕೋಟ್ಯಾನ್, ಮಾಜಿ ಒಕ್ಕೂಟ ಅಧ್ಯಕ್ಷ ಹರೀಶ್ ಜೈನ್, ಕಳಿಯ ಒಕ್ಕೂಟ ಅಧ್ಯಕ್ಷ ಪ್ರಕಾಶ್ ಮೇರ್ಲ, ಬೆಳ್ತಂಗಡಿ ವಲಯ ಮೇಲ್ವಿಚಾರಕರಾದ ಹರೀಶ್ ಗೌಡ, ಸೇವಾಪ್ರತಿನಿಧಿ ವನಿತಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here