ಬೆಳಾಲು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಶಿವಕುಮಾರ್ ಬಾರಿತ್ತಾಯ, ಕಾರ್ಯದರ್ಶಿಯಾಗಿ ಹರೀಶ್ ಆಚಾರ್ಯ ಪುನರಾಯ್ಕೆ

0

ಬೆಳಾಲು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳಾಲು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳಾಲಿನ ವಿವಿಧ ಸಂಘ ಸಂಸ್ಥೆಗಳು ಮತ್ತು ಊರವರ ಸಹಕಾರದಲ್ಲಿ ನಡಯಲಿರುವ 42 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸಭೆ ಆ.7 ರಂದು ಬೆಳಾಲು ಶ್ರೀ ಧ.ಮ.ಪ್ರೌಢ ಶಾಲೆಯಲ್ಲಿ ನಡೆಯಿತು.

ಈ ವರ್ಷದ ಅಧ್ಯಕ್ಷರಾಗಿ ಶಿವಕುಮಾರ್ ಬಾರಿತ್ತಾಯ ಪಾರಳ, ಕಾರ್ಯದರ್ಶಿಯಾಗಿ ಹರೀಶ್ ಆಚಾರ್ಯ ಕುದ್ರಾಲು ಪುನರಾಯ್ಕೆಗೊಂಡರು.ಇತರ ಪದಾಧಿಕಾರಿಗಳು ಗೌರವಾಧ್ಯಕ್ಷರಾಗಿ ಗಣೇಶ್ ಕನಿಕ್ಕಿಲ, ಕೋಶಾಧಿಕಾರಿಯಾಗಿ ಶಶಿಧರ ಓಡಿಪ್ರೊಟ್ಟು, ಜೊತೆ ಕಾರ್ಯದರ್ಶಿಯಾಗಿ ಆಶಾ, ಉಮೇಶ ಆಚಾರ್ಯ, ಉಪಾಧ್ಯಕ್ಷರುಗಳಾಗಿ ಒಕ್ಕೂಟದ ಅಧ್ಯಕ್ಷರುಗಳಾದ ಗಂಗಾಧರ ಸಾಲಿಯಾನ್ ಮಾಯ, ಸಂಜೀವ ಗೌಡ ಮಂಡಾಲು, ಎಲ್ಯಣ್ಣ ನಾಯ್ಕ ಸುರುಳಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಆಯ್ಕೆಯಾದರು.

ಸಭೆಯಲ್ಲಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ, ಉಪಾಧ್ಯಕ್ಷ ಸತೀಶ್ ಎಳ್ಳುಗದ್ದೆ, ಯೋಜನೆಯ ಮೇಲ್ವಿಚಾರಕಿ ವನಿತಾ, ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್, ಸೇವಾ ಪ್ರತಿನಿಧಿಗಳು, ಒಕ್ಕೂಟ ಮತ್ತು ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here