ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

0

ಬೆಳ್ತಂಗಡಿ: ಇಲ್ಲಿನ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳ್ಳಿಹಬ್ಬ ವರ್ಷ ಆಚರಿಸಿಕೊಳ್ಳುತ್ತಿರುವ ಧರ್ಮಾಧ್ಯಕ್ಷ ಹಾಗೂ ಬೆಳ್ತಂಗಡಿ ತಾಲೂಕು ಸೌಹಾರ್ದ ವೇದಿಕೆ ಸಂಸ್ಥಾಪಕ ಅಧ್ಯಕ್ಷರೂ ಆಗಿರುವ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಗುರುವಾರದಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗೌರವಾಭಿನಂದನೆ ಸಲ್ಲಿಸಲಾಯಿತು.

ಅವರ ಅಧಿಕೃತ ನಿವಾಸಕ್ಕೆ ತೆರಳಿದ ಲಯನ್ಸ್ ಸದಸ್ಯರನ್ನು ಪರಿಚಯಿಸಿಕೊಂಡ ಬಿಷಪ್ ಅವರು ವಿಶೇಷ ಪ್ರಾರ್ಥನೆ ಮೂಲಕ ಆಶೀರ್ವದಿಸಿದರು. ಭೇಟಿ ಮಾಡಿದ ಎಲ್ಲರಿಗೂ ಸಿಹಿತಿಂಡಿ ನೀಡಿ ಪುರಸ್ಕರಿಸಿದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಕಾರ್ಯದರ್ಶಿ ಅನಂತಕೃಷ್ಣ, ಕೋಶಾಧಿಕಾರಿ ಸುಭಾಷಿಣಿ, ಲಯನ್ಸ್ ಸದಸ್ಯರುಗಳಾದ ಬಿ.ಪಿ ಅಶೋಕ್ ಕುಮಾರ್, ಧರಣೇಂದ್ರ ಕೆ ಜೈನ್, ಧತ್ತಾತ್ರೇಯ ಗೊಲ್ಲ, ವಿನ್ಸೆಂಟ್ ಟಿ ಡಿಸೋಜಾ ಉಪಸ್ಥಿತರಿದ್ದರು. ಅಶ್ರಫ್ ಆಲಿಕುಂಞಿ ಮುಂಡಾಜೆ ಕಾರ್ಯಕ್ರಮ ಸಂಯೋಜಿಸಿದರು.

LEAVE A REPLY

Please enter your comment!
Please enter your name here