ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆಜಿ ರಕ್ತ ಚಂದನ ವಶಕ್ಕೆ

0

ಬೆಳ್ತಂಗಡಿ: ವೇಣೂರು ಸಮೀಪ ಕರಿಮಣೇಲು ಎಂಬಲ್ಲಿ ವೇಣೂರು ವಲಯಾರಣ್ಯಧಿಕಾರಿ ನೇತೃತ್ವದ ತಂಡವು 125 ಕೆ.ಜಿ. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರಕ್ತ ಚಂದನವನ್ನು ದಾಳಿ ಮಾಡಿ ವಶಕ್ಕೆ ಪಡೆದಿದೆ.

ಆರೋಪಿತರಾದ ಬಂಟ್ವಾಳ ಮಾವಿನಕಟ್ಟೆ ನಿವಾಸಿ ಖಾಲಿದ್ ಹಾಗೂ ಗುರುವಾಯನಕೆರೆ ನಿವಾಸಿ ದೀಕ್ಷಿತ್ ಅವರನ್ನು ಬಂಧಿಸಲಾಗಿದೆ.ಇವರು ವೇಣೂರು ಕರಿಮಣೇಲು ಎಂಬಲ್ಲಿಂದ ಅಕ್ರಮವಾಗಿ ರಕ್ತಚಂದನ ಸಾಗಾಟ ನಡೆಸಿದ್ದರು‌.ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಲಯಾರಣ್ಯಧಿಕಾರಿ ಮಹೀಮ್ ಜನ್ನು ನೇತೃತ್ವದ ತಂಡ ಆರೋಪಿಗಳು ಸಹಿತ 125 ಕೆ.ಜಿ. ರಕ್ತಚಂದನ ಸಾಗಾಟಕ್ಕೆ ಬಳಸಿದ ವಾಹನ ವಶಕ್ಕೆ‌ಪಡೆದಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದು, ಇನ್ನಷ್ಟೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

LEAVE A REPLY

Please enter your comment!
Please enter your name here