Site icon Suddi Belthangady

ಬೆಳ್ತಂಗಡಿ ಗುರುನಾರಾಯಣ ಸಂಘದಲ್ಲಿ ಆಟಿದ ಅಟಿಲ್ದ ಕೂಟ

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಬಿಲ್ಲವ ಮಹಿಳಾ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಆ.13 ರಂದು ಶ್ರೀ ಗುರುನಾರಾಯಣ ಸಂಕೀರ್ಣದ ಸಭಾ ಭವನದಲ್ಲಿ ಜರಗಿತು.

ಕಾರ್ಯಕ್ರಮವನ್ನು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಗೌರವಾಧ್ಯಕ್ಷ ಮಾಜಿ ಶಾಸಕ ಕೆ. ವಸಂತ ಬಂಗೇರ ಉದ್ಘಾಟಿಸಿದರು.ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ಅಧ್ಯಕ್ಷತೆ ವಹಿಸಿದ್ದರು.ಯುವ ಸಾಹಿತಿ ಅರ್ಚನ ಎಂ. ಬಂಗೇರ ಸಂಪಲ್ಮನಾ ವ್ಯಕ್ತಿಗಳಾಗಿ ಭಾಗವಹಿಸಿದ್ದರು.ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಜಿತಾ ವಿ. ಬಂಗೇರ, ಕಾರ್ಯದರ್ಶಿ ಶಾ0ಭಾವಿ ವಿ. ಬಂಗೇರ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಕಾರ್ಯದರ್ಶಿ ಜಯವಿಕ್ರಮ್, ಯುವ ಬಿಲ್ಲವ ವೇದಿಕೆಯ ಉಪಾಧ್ಯಕ್ಷ ನವೀನ್ ಇಂದಬೆಟ್ಟು, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುಜಿತಾ ವಿ. ಬಂಗೇರ ಮತ್ತು ಅರ್ಚನ ಎಂ. ಬಂಗೇರ ಚೆನ್ನೆಮಣೆ ಆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿಲ್ಲವ ಮಹಿಳಾ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷೆ ರಾಜಶ್ರೀ ರಮನ್ ಪ್ರಸ್ತಾವಿಕವಾಗಿ ಮಾತನಾಡಿದರು, ಉಪಾಧ್ಯಕ್ಷೆ ಕೇಶವತಿ ಅತಿಥಿಯ ಪರಿಚಯಿಸಿದರು.ಶಾಂತ ಜೆ. ಬಂಗೇರ ನಿರೂಪಿಸಿದರು.ಮಹಿಳಾ ಬಿಲ್ಲವ ವೇದಿಕೆಯ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು, ಮಾಜಿ ಪದಾಧಿಕಾರಿಗಳು, ಸದಸ್ಯರು, ಸಂಘದ ನಿರ್ದೇಶಕರು, ಸದಸ್ಯರು ಗ್ರಾಮ ಸಮಿತಿಗಳ ಪದಾಧಿಕಾರಿಗಳು ಹಾಜರಿದ್ದರು.

ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧನರಾದ ಸ್ಪಂದನಾ ವಿಜಯ ರಾಘವೇಂದ್ರ ಮತ್ತು ಪುರುಷೋತ್ತಮ ಬಿ. ಸಿ. ರೋಡ್ ಇವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಆಟಿ ಕಲೆಂಜ ಪ್ರದರ್ಶನ ನಡೆಯಿತು.ಬಳಿಕ ಮಹಿಳಾ ಬಿಲ್ಲವ ವೇದಿಕೆಯ ಪದಾಧಿಕಾರಿಗಳು, ಗ್ರಾಮ ಸಮಿತಿ ಸದಸ್ಯರು ತಂದಿರುವ ವಿವಿಧ ಖಾದ್ಯದ ಸಹಭೋಜನ ನಡೆಯಿತು.

Exit mobile version