ಕಲ್ಮಂಜ: ತೆಂಗಿನ ಮರದಿಂದ ಸೀಯಾಳ ತೆಗೆಯುವಾಗ ಅಲ್ಯೂಮಿನಿಯಂ ಡೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿ ಸಾವು

0

ಕಲ್ಮಂಜ: ತೆಂಗಿನ ಮರದಿಂದ ಸೀಯಾಳ ಕೀಳುತ್ತಿದ್ದ ವೇಳೆ ಅಲ್ಯೂಮಿನಿಯಂ ದೋಟಿ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ.
ಮೃತ ವ್ಯಕ್ತಿ ಕಲ್ಮಂಜ ಗ್ರಾಮದ ಅಂಬಟ್ಟೆ ಮನೆ ನಿವಾಸಿ ಶಶಿಧರನ್ ನಾಯರ್ (68) ಮೃತರು.

ಮನೆಯ ಸಮೀಪವಿರುವ ತೋಟಕ್ಕೆ ಸೀಯಾಳ ತೆಗೆಯಲೆಂದು ಆ.13 ರಂದು ಅಲ್ಯುಮಿನಿಯಂ ದೋಟಿಯೊಂದಿಗೆ ಹೋಗುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ತಗುಲಿದ್ದು ದೋಟಿಯ ಮೂಲಕ ವಿದ್ಯುತ್ ಪ್ರವಹಿಸಿ ವಿದ್ಯುತ್ ಶಾಕ್ ಹೊಡೆದು ಅವರು ನೆಲಕ್ಕೆ ಉರುಳಿ ಬಿದ್ದು ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಕೊಂಡೊಯ್ದ ವೇಳೆಗೆ ಅವರು ಮೃತಪಟ್ಟಿದ್ದರು.

ಮೃತರ ಪತ್ನಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ

LEAVE A REPLY

Please enter your comment!
Please enter your name here