ಚಾರ್ಮಾಡಿ: ಪಾಂಡಿಕಟ್ಟೆ ಅಕ್ರಮ ಗಾಂಜಾ ಮಾರಾಟ ಯತ್ನ

0

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಪಾಂಡಿಕಟ್ಟೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ವ್ಯಕ್ತಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಮೂಲತಃ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ನಿವಾಸಿ, ಪ್ರಸ್ತುತ ಬಂಟ್ವಾಳ ತಾಲೂಕು ಸಜಿಪನಡು ಗ್ರಾಮದ ಲಕ್ಷ್ಮಣ ಕಟ್ಟೆ ಮನೆ ಎಂಬಲ್ಲಿ ನೆಲೆಸಿರುವ ಕರೀಂ ಎಂಬವರ ಮಗನಾದ ನೌಪಲ್(32) ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಪಾಂಡಿಕಟ್ಟೆ ಎಂಬಲ್ಲಿ ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದು, ಈ ಬಗ್ಗೆ ಗಾಂಜಾ ಮಾರಾಟ ಮಾಡಲು ಬಂದಿರುವ ಬಗ್ಗೆ ಸಂಶಯ ಇರುವ ಬಗ್ಗೆ ಖಚಿತ ಮಾಹಿತಿ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ಮತ್ತು ತಂಡಕ್ಕೆ ಸಿಕ್ಕಿದ್ದು ಅದರಂತೆ ಆ.11ರಂದು 2 ಗಂಟೆ ಸುಮಾರಿಗೆ ಜೀಪು ನಿಲ್ಲಿಸಿದಾಗ ಪೊಲೀಸರನ್ನು ನೋಡಿ ಆರೋಪಿ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.ಈ ವೇಳೆ ಪೊಲೀಸ್ ಸಿಬ್ಬಂದಿಗಳು ಆತನನ್ನು ಬೆನ್ನಟ್ಟಿಕೊಂಡು ಹೋಗಿ ಬಂಧಿಸಿದ್ದಾರೆ.

ಆರೋಪಿ ಬಳಿ ಪ್ಲಾಸ್ಟಿಕ್ ಕೈಚೀಲದಲ್ಲಿ 150 ಗ್ರಾಂ ನಷ್ಟು ಗಾಂಜಾದ ಮೊಗ್ಗು, ಎಲೆ ಮತ್ತು ಬೀಜ ಪತ್ತೆಯಾಗಿದ್ದು ಅದನ್ನು ವಶಪಡಿಸಿಕೊಳ್ಳಲಾಗಿದೆ.ವಶಪಡಿಸಿಕೊಳ್ಳಲಾದ ವಸ್ತುಗಳ ಒಟ್ಟು ಮೌಲ್ಯ ಅಂದಾಜು 4 ಸಾವಿರ ರೂಪಾಯಿ ಆಗಿದೆ. ಈ ಬಗ್ಗೆ ಎನ್‌ಡಿಪಿಎಸ್ ಕಾಯ್ದೆಯಡಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here