ಕಳಿಯ: ಗ್ರಾಮ ಪಂಚಾಯತ್ ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿಕಟ ಪೂರ್ವ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ

0

ಗೇರುಕಟ್ಟೆ: ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತು ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ನಿಕಟ ಪೂರ್ವ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆ ಯವರಿಗೆ ಕಳಿಯ ಗ್ರಾಮ ಬಿಜೆಪಿ ಶಕ್ತಿ ಕೇಂದ್ರ ಹಾಗೂ ವಿವಿಧ ಸಂಘದ ಮೂಲಕ ಗೌರವ, ಸನ್ಮಾನ ಕಾರ್ಯಕ್ರಮ ಆ.14ರಂದು ಗೇರುಕಟ್ಟೆ ಸಹಕಾರಿ ಭವನದಲ್ಲಿ ಜರುಗಿತು.

ಕಳಿಯ ಗ್ರಾಮ ಪಂಚಾಯತು ಪಂಚಾಯತು ನೂತನ ಅಧ್ಯಕ್ಷ ದಿವಾಕರ ಮೆದಿನ, ಉಪಾಧ್ಯಕ್ಷೆ ಇಂದಿರಾ ಬಿ.ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷೆ ಸುಭಾಷಿಣಿ ಕೆ.ಜನಾರ್ದನ ಗೌಡ, ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ, ಪ್ರಸ್ತುತ ಸದಸ್ಯರಾದ ಸುಧಾಕರ ಮಜಲು, ವಿಜಯ ಕುಮಾರ್ ಗೌಡ ಕೆ,ಯಶೋಧರ ಶೆಟ್ಟಿ ಕೊರಂಜ, ಶಕುಂತಲಾ ಇವರನ್ನು ಗಣ್ಯರ ಉಪಸ್ಥಿತಿಯಲ್ಲಿ ವೇದಿಕೆಯಲ್ಲಿ ಸನ್ಮಾನಿಸಿ, ಗೌರವಿಸಿದರು.

ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು ಸಭೆಯ ಅಧ್ಯಕ್ಷತೆ ವಹಿಸಿದ್ದರು.ನೂತನ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ನೇತೃತ್ವ ವಹಿಸಿದ ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು ಕಳಿಯ ಗ್ರಾಮ ಶಕ್ತಿ ಕೇಂದ್ರ ಅಧ್ಯಕ್ಷ ಶೇಖರ ನಾಯ್ಕ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಿದರು.

ಬಿಜೆಪಿ ಪಕ್ಷದ ಪ್ರಮುಖರಾದ ಸುರೇಶ್ ಆರ್.ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಸನ್ಮಾನಿತರ ಬಗ್ಗೆ ಅಭಿನಂದನಾ ಭಾಷಣ ಮಾಡಿದರು.ಸ್ಥಳೀಯ ವಿವಿಧ ಸಂಘ, ಸಂಸ್ಥೆ ಗಳಾದ ಗೇರುಕಟ್ಟೆ ಕಳಿಯ ಸಿ.ಎ.ಬ್ಯಾಂಕ್,ಗೇರುಕಟ್ಟೆ ಆಟೊ ಚಾಲಕ-ಮಾಲಕರ ಸಂಘ, ಶಕ್ತಿ ಕೇಂದ್ರ ಹಾಗೂ ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜನಾರ್ದನ ಪೂಜಾರಿ ಗೇರುಕಟ್ಟೆ ಗೌರವಾರ್ಪಣೆ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತು ಮಾಜಿ ಸದಸ್ಯರಾದ ಮಮತ ಎಂ ಶೆಟ್ಟಿ, ಶಶಿಧರ ಶೆಟ್ಟಿ ಹೀರ್ಯ, ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯರಾದ ಜನಾರ್ದನ ಪೂಜಾರಿ ಗೇರುಕಟ್ಟೆ, ದಿನೇಶ್ ಗೌಡ ಕಲಾಯಿತೊಟ್ಟು, ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆ ಕೋಶಾಧಿಕಾರಿ ಬಾಲಕೃಷ್ಣ ಗೌಡ ಬಿರ್ಮೋಟ್ಟು, ಕೊಂಕಣ್ ರೈಲ್ವೇ ಅಧಿಕಾರಿ ಸತೀಶ್ ಕುಮಾರ್ ಆರ್.ಎನ್., ನ್ಯಾಯತರ್ಪು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ದನ ಗೌಡ, ನಾಳ ಹಾಲು ಉತ್ಪಾದಕರ ಸಂಘದ ನಿರ್ದೇಶಕ ಸೋಮಪ್ಪ ಗೌಡ ಕುಬಾಯ, ಕಳಿಯ ಗ್ರಾಮ ಪಂಚಾಯತು ಮಾಜಿ ಅಧ್ಯಕ್ಷ ತುಕರಾಮ ಪೂಜಾರಿ, ಸ್ಥಳೀಯರಾದ ಪೂವಪ್ಪ ಭಂಡಾರಿ, ಸಂಜೀವ ಬಂಗೇರ, ಬಿಜೆಪಿ ಪಕ್ಷದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

ಬೆಳ್ತಂಗಡಿ ಸಹಕಾರ ಭಾರತಿ ಅಧ್ಯಕ್ಷ ರಾಜೇಶ್ ಪೆಂರ್ಬುಡ ಸ್ವಾಗತಿಸಿದರು.ನಾಳ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರು, ಬಿಜೆಪಿ ಪಕ್ಷದ ಸದಸ್ಯರಾದ ಉಮೇಶ್ ಕೇಲ್ದಡ್ಕ ಕಾರ್ಯ ಕ್ರಮ ನಿರೂಪಿಸಿದರು.ಕಳಿಯ ಸಿ.ಎ.ಬ್ಯಾಂಕ್ ನಿರ್ದೇಶಕ ಹಾಗೂ ಕಳಿಯ ಗ್ರಾಮ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಶೇಖರ ನಾಯ್ಕ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here