Site icon Suddi Belthangady

ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ ಉಜಿರೆ ಇದರ ವತಿಯಿಂದ ಸ್ವಾತಂತ್ರೋತ್ಸವ ದಿನಾಚರಣೆ

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ ಉಜಿರೆ ಇದರ ವತಿಯಿಂದ ಸ್ವಾತಂತ್ರೋತ್ಸವ ದಿನಾಚರಣೆ ಉಜಿರೆ ಬಸ್ ನಿಲ್ದಾಣ ಬಳಿ ಜರಗಿತು.ಅನುವಂಶಿಕ ಆಡಳಿತ ಮೊತ್ತೇಸರರು ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಗೌರವಾಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯ ಧ್ವಜಾರೋಹಣಗೈದರು.

ಉಜಿರೆ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ಉಜಿರೆ, ಉಜಿರೆ ಗ್ರಾ.ಪಂ.ಅಧ್ಯಕ್ಷೆ ಉಷಾಕಿರಣ್ ಅರವಿಂದ ಕಾರಂತ್, ಭಾರತೀಯ ಸೇನೆಯ ನಿವೃತ್ತ ಸೈನಿಕರು ಮಲ್ವಿನ್ ಫೆರ್ನಾಂಡಿಸ್ ಉಜಿರೆ ಉಪಸ್ಥಿತರಿದ್ದರು.

Exit mobile version