Site icon Suddi Belthangady

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ 77 ನೇ ಸ್ವಾತಂತ್ರ್ಯ ದಿನಾಚರಣೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿ ಆವರಣದಲ್ಲಿ ನಡೆಯಿತು.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ದ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ಹಾಗೂ ಸ್ವಾತಂತ್ರ್ಯ ಬಗ್ಗೆ ಜಿಲ್ಲಾ ಕಾಂಗ್ರೆಸ್ ಎಸ್ ಸಿ ಘಟಕದ ಅಧ್ಯಕ್ಷರಾದ ಶೇಖರ್ ಕುಕ್ಕೆಡಿ, ಹಾಗೂ ನ್ಯಾಯವಾದಿ ಸಂತೋಷ ಕುಮಾರ್ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಹಳ್ಳಿ ಮನೆ, ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಸೆಬಾಸ್ಟಿನ್ ಪಿ ಟಿ, ತಾಲೂಕು ಸೇವಾದಳ ಶರತ್ ಕಳೆಂಜ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಎಚ್ ಕೆ ಖಾಲೀದ್ ಲ್ಯಾಲ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಪ್ರವೀಣ್ ಗೌಡ, ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೌಮ್ಯ ಲಾಯಿಲ, ಜಿಲ್ಲಾ ಯುವ ಕಾಂಗ್ರೆಸ್ ವಕ್ತಾರ ಸಂದೀಪ್ ನಿರಲ್ಕೆ, ಇಂಟಕ್ ನಗರ ಸಮಿತಿಯ ಅಧ್ಯಕ್ಷರಾದ ನವೀನ್ ಗೌಡ ಸವಣಾಲು, ಪಕ್ಷದ ಪ್ರಮುಖರಾದ ನಾರಾಯಣ ಗೌಡ ದೇವಸ್ಯ, ಸಚಿನ್ ಕುಮಾರ್ ನೂಜೋಡಿ ಪ್ರವೀಣ್ ವಿ.ಜಿ, ರವೀಂದ್ರ ಅಮೀನ್ ಬಳಂಜ, ಯಶೋಧರ ಚಾರ್ಮಾಡಿ, ರಜತ್ ಗೌಡ ಉಜಿರೆ, ಜೈಸನ್ ಪಟ್ಟೇರಿ, ಕುಶಾಲಪ್ಪ ಗೌಡ ಶಿರ್ಲಾಲು, ಜಾರ್ಜ್ ಚಿಬಿದ್ರೆ, ರಾಜೇಶ್ ಭಟ್ ಸವಣಾಲು, ಸುರೇಶ್ ಬೈರ ಲಾಯಿಲ, ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಜೋಸೆಫ್ ಕೆ.ಜೆ (ರೊಯಿ) ಕಾರ್ಯಕ್ರಮ ನಿರೂಪಿಸಿ, ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಕೆ.ಎಮ್ ಅಬ್ದುಲ್ ಕರೀಮ್ ಗೇರುಕಟ್ಟೆ ಧನ್ಯವಾದವಿತ್ತರು.

Exit mobile version