Site icon Suddi Belthangady

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.ಶಾಲಾ ಸೇವಾ ಸಮಿತಿ ಅಧ್ಯಕ್ಷ ದಿವಾಕರ ಶಾಸ್ತ್ರಿ ಇವರು ದ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭ ದಲ್ಲಿ ಪೋಷಕರು, ಗ್ರಾಮಸ್ಥರು ಹಾಗೂ ಸೇವಾ ಸಮಿತಿಯ ಸದಸ್ಯರು ಎಲ್ಲರೂ ಹಾಜರಿದ್ದರು.ಬಳಿಕ ಶಾಲಾ ವಿದ್ಯಾರ್ಥಿಗಳು ಉರುವಾಲು ಪದವುವರೆಗೆ ಘೋಷಣಾ ವಾಖ್ಯಾಗಳೊಂದಿಗೆ ಮೆರವಣಿಗೆ ಹೋದರು.

ಈ ಸಂದರ್ಭದಲ್ಲಿ ಉರುವಾಲು ಪದವು ಇಲ್ಲಿನ ಗ್ರಾಮಸ್ಥರು ಕೂಡಿಕೊಂಡು ಎಂದಿನಂತೆ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಿದರು.ಬಳಿಕ ಶಾಲಾ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಕೊನೆಯಲ್ಲಿ ರೈತ ಬಂಧು, ಮಾರುತಿ ಪುರಾ ಇವರು ನೀಡಿದ ಸಿಹಿ ತಿನಿಸುಗಳನ್ನು ವಿದ್ಯಾರ್ಥಿಗಳಿಗೆ ಹಂಚಲಾಯಿತು.

Exit mobile version