ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ

0

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸ್ಥಳೀಯರಾದ ಸತೀಶ್ ಭಟ್ ರವರು ಆಗಮಿಸಿ, ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ರವರು ಉಪಸ್ಥಿತರಿದ್ದರು.ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಸತೀಶ್ ಭಟ್ ರವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿಗಳ ಬಗ್ಗೆ ಗುಣಗಾನ ಮಾಡುತ್ತಾ, ಸ್ವಾತಂತ್ರ್ಯಕ್ಕಾಗಿ ಹಲವು ಜನ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ ಅವರೆಲ್ಲರ ತ್ಯಾಗ ಮತ್ತು ಬಲಿದಾನದ ಪರಿಣಾಮವಾಗಿ ನಾವಿಂದು ಸ್ವಾತಂತ್ರ್ಯದ ಸವಿಯನ್ನು ಸವಿಯುತ್ತಿದ್ದೇವೆ.ಈ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಹೋಗುವುದು ಹಾಗೂ ದೇಶವನ್ನು ಶಕ್ತಿಯುತಗೊಳಿಸುವುದು ನಮ್ಮಆದ್ಯ ಕರ್ತವ್ಯ ಆಗಿದೆ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯ ಪಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬರವರು ಭಾರತ ದೇಶದಹಿರಿಮೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ವಿದ್ಯಾರ್ಥಿಗಳಾದ ನಿಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಆಸಿನರಾಗಿದ್ದ ಪುದುವೆಟ್ಟು ಗ್ರಾಮ ಪಂಚಾಯಿತಿಯ ಸದಸ್ಯೆ ವನಿತಾ ರವರು ಸೇರಿರುವ ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶೀನಪ್ಪಗೌಡರವರು ಬ್ರಿಟಿಷರ ಆಳ್ವಿಕೆಯಲ್ಲಿದ್ದಂತಹ ಭಾರತ ದೇಶಕ್ಕೆ ಸ್ವಾತಂತ್ರ್ಯಲಭಿಸಿದಂತಹ ಸಂದರ್ಭಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಸ್ವಾತಂತ್ರ್ಯ ದಿನಾಚರಣೆಯ ಕುರಿತಾದ ಭಾಷಣ ಹಾಗೂ ದೇಶಭಕ್ತಿ ಗೀತೆಗಳನ್ನು ಏರ್ಪಡಿಸಲಾಗಿತ್ತು.ಕಾರ್ಯಕ್ರಮದಲ್ಲಿ ಮಕ್ಕಳಿಗೆ ಶಾಲೆಯಲ್ಲಿ ಈ ಮೊದಲೇ ಏರ್ಪಡಿಸಲಾಗಿದ್ದ ಚಿತ್ರಕಲೆ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು.ಬಹುಮಾನದ ವೆಚ್ಚವನ್ನು ಪುದುವೆಟ್ಟು ಗ್ರಾಮ ಪಂಚಾಯಿತಿ ವತಿಯಿಂದ ನೀಡಲಾಗಿತ್ತು.ಬಹುಮಾನ ವಿತರಣಾ ಕಾರ್ಯಕ್ರಮವನ್ನು ಶಾಲೆಯ ಹಿರಿಯ ಶಿಕ್ಷಕಿ ತೇಜಾವತಿಯವರು ನಡೆಸಿಕೊಟ್ಟರು.ಕಾರ್ಯಕ್ರಮದಲ್ಲಿ ಸೇರಿರತಕ್ಕಂಥ ಎಲ್ಲರಿಗೂ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಸಿಹಿ ತಿಂಡಿಯನ್ನು ನೀಡಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿರುವಂತಹ ಸತೀಶ್ ಭಟ್ ರವರ ವತಿಯಿಂದ ಮಕ್ಕಳಿಗೆ ಸಿಹಿ ತಿಂಡಿಯನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಂತಹ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಟಿಕ್ಕಾ ಸಾಹೇಬರ ವತಿಯಿಂದ ಕೂಡ ಮಕ್ಕಳಿಗೆ ಸಿಹಿ ತಿಂಡಿಯನ್ನು ವಿತರಿಸಲಾಯಿತು.ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಸಭಾ ಕಾರ್ಯಕ್ರಮದಲ್ಲಿ ಶೀಲಾ ಎನ್ ರವರು ಸ್ವಾಗತಿಸಿ, ಸುಮತಿ, ಸುಜಾತಾ ರವರು ಧನ್ಯವಾದಗೈದ ಕಾರ್ಯಕ್ರಮವನ್ನು ಪುಷ್ಪಲತಾ ರವರು ನಿರೂಪಿಸಿದರು.ನಿಶಾಂತ್ ಕುಮಾರ್ ಮುಖ್ಯ ಅತಿಥಿಗಳ ಕಿರುಪರಿಚಯವನ್ನು ಮಂಡಿಸಿದರು.ತದ ನಂತರ ಭವ್ಯ ಮೆರವಣಿಗೆ ಮೂಲಕ ಸ್ವಾತಂತ್ರ್ಯ ಘೋಷಣೆಗಳನ್ನು ಕೂಗುತ್ತಾ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಶಾಲೆಯ ಎಲ್ಲ ಶಿಕ್ಷಕ ವೃಂದದವರು, ಶಾಲೆಯ ಅಕ್ಷರ ದಾಸೋಹದ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಪೋಷಕವೃಂದದವರು ಆಗಮಿಸಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟರು.

LEAVE A REPLY

Please enter your comment!
Please enter your name here