ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು.

ಸ್ವಾತಂತ್ರ್ಯ ದಿನಾಚರಣೆಯ ಈ ಸಂಭ್ರಮದಲ್ಲಿ ಪಾಲ್ಗೊಂಡು ಧ್ವಜಾರೋಹಣವನ್ನು ಮಾಡಿದ ಗುರವಾಯನಕೆರೆಯ ಖ್ಯಾತ ವೈದ್ಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಡಾ! ವೇಣುಗೋಪಾಲ ಶರ್ಮ ಅವರು ಮಾತನಾಡಿ “ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ಕಿರಿಯರು ತಮ್ಮ ಜೀವನದಲ್ಲಿ ಅರ್ಥವತ್ತಾಗಿ ಅಳವಡಿಸಿಕೊಂಡು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕರಾದ ಜನಾಬ್ ಸೈಯದ್ ಹಬೀಬ್ ವಹಿಸಿಕೊಂಡಿದ್ದರು.

ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿಯಾದ ಸೈಯದ್ ಅಯ್ಯುಬ್, ಕೋಶಧಿಕಾರಿಯಾದ ಸೈಯದ್ ಇರ್ಫಾನ್, ಶಾಲಾ ಮುಖ್ಯೋಪಾಧ್ಯಾಯನಿ ಜಾಕಿನ್ ಬಿನ್ ಹಾಗೂ ಸ್ಟಾರ್ ಲೈನ್ ಅರೇಬಿಕ್ ಶಿಕ್ಷಣ ವಿಭಾಗದ ಮುಖ್ಯ ಗುರುಗಳಾದ ಅಬ್ದುಲ್ ರಜಾಕ್ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳಿಂದ ನಡೆದ ಸುಂದರವಾದ ಪಥ ಸಂಚಲನದಲ್ಲಿ ಭಾರತದ ಸಂಸ್ಕೃತಿ, ಭಾವೈಕ್ಯತೆ ಹಾಗೂ ಗಡಿ ಕಾಯುವ ವೀರಯೋಧರ ವೇಷ ಭೂಷಣಗಳ ಅಣಕು ಪ್ರದರ್ಶನ ಎಲ್ಲರ ಮೆಚ್ಚುಗೆಯನ್ನು ಪಡೆಯಿತು.ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಜನಾಬ್ ಸೈಯದ್ ಹಬೀಬ್ ರವರು “ವಿದ್ಯಾರ್ಥಿಗಳು ಸ್ವತಂತ್ರ ದೇಶದ ಆದರ್ಶ ಪ್ರಜೆಗಳಾಗಿ ಬಾಳಬೇಕು” ಎಂದರು.ಸಮಾಜದಲ್ಲಿ ಬಡಜನರ ತನ್ನ ಜೀವನವನ್ನು ಮುಡಿಪಾಗಿಟ್ಟ ವೈದ್ಯ ಲೋಕದಲ್ಲಿ ವಿಶೇಷ ಹೆಸರು ಗಳಿಸಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಯಾದ ವೇಣುಗೋಪಾಲ ಶರ್ಮ ಇವರಿಗೆ ಸಂಸ್ಥೆಯ ವತಿಯಿಂದ ವಿಶೇಷ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಭಾಷಣ ಸಾಂಸ್ಕೃತಿಕ ಕಾರ್ಯಕ್ರಮಗಳು, ಚದ್ಮ ವೇಷ ಸ್ಪರ್ಧೆಗಳು ಹಾಗೂ ನಾಟಕ ಪ್ರದರ್ಶನಗಳು ನಡೆದವು.ಶಾಲಾ ಸಹ ಶಿಕ್ಷಕಿ ಅಶ್ವಿನಿ ಅಥಿತಿಗಳನ್ನು ಸ್ವಾಗತಿಸಿದರು. ಶಾಲಾ ಸಹ ಶಿಕ್ಷಕ ನೋರ್ಬರ್ಟ್ ಧನ್ಯವಾದ ಕಾರ್ಯಕ್ರಮವನ್ನು ನೆರವೇರಿಸಿದರು.ಹಾಗೂ ಸಹ ಶಿಕ್ಷಕಿ ಸುಶ್ಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here