ಹೊಕ್ಕಾಡಿಗೋಳಿ ಸ.ಉ.ಪ್ರಾ.ಶಾಲೆಯಲ್ಲಿ ರಾಜೇಶ್ ನೆಲ್ಯಾಡಿ ಇವರಿಗೆ ಬೀಳ್ಕೊಡುಗೆ ಸಮಾರಂಭ

0

ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯಿಂದ ಹೆಚ್ಚುವರಿ ವರ್ಗಾವಣೆಗೊಂಡು ಪೆರಿಂಜೆ ಶಾಲೆಗೆ ಸ್ಥಳ ನಿಯುಕ್ತಿಗೊಂಡಿರುವ ಶಿಕ್ಷಕರಾದ ರಾಜೇಶ್ ನೆಲ್ಯಾಡಿ ಇವರ ಬೀಳ್ಕೊಡುಗೆ ಸಮಾರಂಭ “ಗುರುವಂದನಾ ಕಾರ್ಯಕ್ರಮ” ಇಂದು ನಡೆಯಿತು.ಇವರು ಕಳೆದ ಹನ್ನೊಂದು ವರುಷಗಳಿಂದ ಹೊಕ್ಕಾಡಿಗೋಳಿ ಶಾಲೆಯಲ್ಲಿ ಶಿಕ್ಷಕರಾಗಿ ಹಾಗೂ ಕೆಲವು ವರ್ಷಗಳ ಕಾಲ ಪ್ರಭಾರ ಮುಖ್ಯೋಪಾಧ್ಯಾಯರಾಗಿಯೂ ಸೇವೆ ಸಲ್ಲಿಸಿದವರು.ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಶಿಕ್ಷಕರೊಂದಿಗಿನ ಒಡನಾಟದ ಕುರಿತು ಹಾಗೂ ಇವರ ಅವಧಿಯಲ್ಲಿ ಶಾಲೆ ಕಂಡ ಪ್ರಗತಿಯ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು. ಶಾಲೆಯ ವತಿಯಿಂದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಶಿಕ್ಷಕರಾದ ರಾಜೇಶ್ ನೆಲ್ಯಾಡಿ ತಮ್ಮ ಅವಧಿಯಲ್ಲಿ ಶಾಲೆಯ ಅಭಿವೃದ್ಧಿಗೆ ಸಹಕರಿಸಿದ ಸ್ಥಳೀಯ ಸಂಸ್ಥೆಗಳು, ಶಿಕ್ಷಕರು, ಶಾಲಾ ಅಭಿವೃದ್ಧಿ ಸಮಿತಿಯವರು, ಹಳೆ ವಿದ್ಯಾರ್ಥಿಗಳು ಹಾಗೂ ವಿದ್ಯಾಭಿಮಾನಿಗಳಿಗೆ ಧನ್ಯವಾದ ಸಮರ್ಪಿಸಿದರು.

ಗ್ರಾಮ ಪಂಚಾಯಿತಿ ಆರಂಬೋಡಿಯ ಸದಸ್ಯರಾದ ಪ್ರಭಾಕರ್ ಎಚ್, ಸುರೇಂದ್ರ ಆಜ್ಜಾಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ಮೃತಿ, ಹೊಸಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಉದ್ಯಮಿ ಕಿರಣ್ ಮಂಜಿಲ, ಎಸ್.ಡಿ.ಎಂ.ಸಿ ಜಿಲ್ಲಾ ಸಮನ್ವಯ ವೇದಿಕೆಯ ಹರೀಶ್ ಕಲ್ಲಬೆಟ್ಟು, ಮುಖ್ಯ ಶಿಕ್ಷಕರಾದ ಸುಮಿತ್ರ ಎಸ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸದಾಶಿವ ಹುಲಿಮೇರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂತೋಷ್ ಮಂಜಿಲ, ಶಿಕ್ಷಕರು, ಪೋಷಕರು, ಹಳೆವಿದ್ಯಾರ್ಥಿಗಳು, ಊರಿನ ವಿದ್ಯಾಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here