ಉಜಿರೆ ಶ್ರೀ.ಧ.ಮಂ.ಅ.ಸೆಕೆಂಡರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಉಜಿರೆ: ಶ್ರೀ.ಧ.ಮಂ.ಅ.ಸೆಕೆಂಡರಿ ಶಾಲೆ ಉಜಿರೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.ಅತಿಥಿಗಳಾಗಿ ಆಗಮಿಸಿದ್ದ ಗಡಿಭದ್ರತಾದಳದ ನಿವೃತ್ತ ಮಾಜಿ ಸೈನಿಕ ಶ್ರೀಯುತ ಪ್ರಸಾದ್.ಡಿ ಯವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ “ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿಕೊಂಡು ಅವರ ಆದರ್ಶಗಳನ್ನು ಮೈಗೂಡಿಸಿಗೊಂಡು, “ದೇಶ ಸೇವೆಯೇ ನಮ್ಮ ಉಸಿರು” ಎಂದು ತಿಳಿದು ದೇಶಾಭಿಮಾನಿಗಳಾಗಿ ಬಾಳಬೇಕು.” ಎಂದು ಹೇಳಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಕೆ ರವರು ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು.ಶಿಕ್ಷಕ ಚಂದ್ರಶೇಖರ್ ಭಟ್ ರವರು ಎಲ್ಲರನ್ನು ಸ್ವಾಗತಿಸಿದರು.ವಿದ್ಯಾರ್ಥಿನಿಯರು ಧ್ವಜಗೀತೆ ಹಾಡಿದರು.ಶಾಲಾ ಶಿಕ್ಷಕವೃಂದ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here