Site icon Suddi Belthangady

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ ಪುರಸ್ಕಾರ

ಪೆರಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪೆರಾಡಿ 2022-23 ಸಾಲಿನಲ್ಲಿ ಶೇ.100 ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಪೆರಾಡಿ ಸಿಎ ಬ್ಯಾಂಕಿನ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಟ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಯು.ಶೇಖ್ ಲತೀಫ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

Exit mobile version