ವಿಜಯ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿಗೆ ಸಾಧನಾ ಪ್ರಶಸ್ತಿಯ ಗೌರವ

0

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಗುರುವಾಯನಕೆರೆಗೆ ಉತ್ತಮ ಸಾಧನೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನ ವತಿಯಿಂದ ನೀಡಲಾದ ಸಾಧನಾ ಪ್ರಶಸ್ತಿ-2023 ಲಭಿಸಿದೆ.

ಈ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಎಸ್.ಜಯರಾಮ ಶೆಟ್ಟಿ ಮತ್ತು ಮುಖ್ಯಕಾರ್ಯನಿರ್ವಾಹಣಾಧಿಕಾರಿ ಸುಜಯ್ ಶೆಟ್ಟಿಯವರು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್, ನಿರ್ದೇಶಕರಾದ ಶಶಿ ಕುಮಾರ್ ಬಾಲ್ಯೋಟ್ಟು, ಎಸ್.ಬಿ.ಜಯರಾಮ ರೈ, ಉಪಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ವಿಜಯ ಕ್ರೆಡಿಟ್ ಸೊಸೈಟಿಯ ನಿರ್ದೇಶಕರುಗಳಾದ ಜಯಂತ ಶೆಟ್ಟಿ ಕುಂಠಿನಿ, ಸೀತಾರಾಮ ಶೆಟ್ಟಿ, ರಘುರಾಮ ಶೆಟ್ಟಿ ಸಾಧನಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here