Site icon Suddi Belthangady

ಬೆಳಾಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು :ಸಾರ್ವಜನಿಕ ಗಣೇಶೋತ್ಸವ ಸಮಿತಿ ಬೆಳಾಲು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಬೆಳಾಲಿನ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಡೆಯುವ 42 ನೇ ವರುಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಆ.20ರಂದು ನೆರವೇರಿತು.

ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ಬಿಡುಗಡೆ ಗೊಳಿಸಿ ಶುಭ ಹಾರೈಸಿದರು.

ಸಮಿತಿಯ ಅಧ್ಯಕ್ಷ ಶಿವಕುಮಾರ್ ಬಾರಿತ್ತಾಯ ನಗರ,ಗೌರವ ಅಧ್ಯಕ್ಷ ಗಣೇಶ ಕೆನಿಕ್ಕಿಲ, ಉಪಾಧ್ಯಕ್ಷರುಗಳಾದ ಒಕ್ಕೂಟದ ಅಧ್ಯಕ್ಷರುಗಳಾದ ಗಂಗಾಧರ ಸಾಲಿಯಾನ್ ಮಾಯ, ಸಂಜೀವ ಗೌಡ ಮಂಡಾಲು,ಎಲ್ಯಣ್ಣ ನಾಯ್ಕ ಸುರುಳಿ, ಕೋಶಾಧಿಕಾರಿ ಶಶಿಧರ ಓಡಿಪ್ರೋಟ್ಟು,ಜೊತೆ ಕಾರ್ಯದರ್ಶಿ ಆಶಾ,ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯ ಸತೀಶ್ ಎಳ್ಳುಗದ್ದೆ, ಸೇವಾ ಪ್ರತಿನಿಧಿಗಳು ಎಲ್. ಜೆ, ಸಮಿತಿಯ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Exit mobile version