ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ “ಸಾಧನ ಪ್ರಶಸ್ತಿ”

0

ಗೇರುಕಟ್ಟೆ: ಕಳಿಯ ಕೃಷಿ ಸಹಕಾರಿ ಸಂಘದ ಸಾಧನೆಗೆ “ಸಾಧನ ಪ್ರಶಸ್ತಿ” ಯ ಗೌರವ ಸನ್ಮಾನ ಪ್ರೋತ್ಸಾಹಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಆ.19 ರಂದು ದಕ್ಷಿಣ ಕನ್ನಡ ಜಿಲ್ಲಾ ಬ್ಯಾಂಕಿನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ಜರುಗಿತು.

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಳಿಯ 2022-23 ನೇ ಸಾಲಿನಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘವನ್ನು ಲಾಭದಾಯಕವಾಗಿ, ಸಂಘದ ಸದಸ್ಯ, ಕೃಷಿಕರಿಗೆ ವಿವಿಧ ಬಗೆಯ ಸವಲತ್ತು, ಮಾರ್ಗದರ್ಶನಗಳನ್ನು ನೀಡುವುದು, ಗ್ರಾಮದ ಅಭಿವೃದ್ಧಿ ಕೆಲಸಕ್ಕೆ ಕೈಜೋಡಿಸಿ ಸಂಘ-ಸಂಸ್ಥೆಗಳೊಂದಿಗೆ ತೊಡಗಿಸಿಕೊಂಡಿರುವ ಮೂಲಕ ಉತ್ತಮ ಗುಣಮಟ್ಟದ ಸಾಧನೆಯನ್ನು ಮನಗಂಡು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ “ಸಾಧನ ಪ್ರಶಸ್ತಿ”ಯ ಗೌರವಕ್ಕೆ ಪಾತ್ರವಾಗಿದೆ.

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಮ್.ಎನ್.ರಾಜೇಂದ್ರ ಕುಮಾರ್ ರವರು ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸತ್ಯಶಂಕರ ಭಟ್ ಕೆ.ಜಿ ರವರನ್ನು ಸನ್ಮಾನಿಸಿ ಪ್ರಶಸ್ತಿ ಪ್ರಧಾನ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಸಂದೇಶ್ ಕುಮಾರ್,ಕಳಿಯ ಸಿ.ಎ.ಬ್ಯಾಂಕ್ ನಿರ್ದೇಶಕರಾದ ದೇವಣ್ಣ ಮೂಲ್ಯ, ಶೇಖರ ನಾಯ್ಕ ಮತ್ತು ರತ್ನಾಕರ ಪೂಜಾರಿ ಬಿ.ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here