Site icon Suddi Belthangady

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ.ರಮೇಶ್

ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಕಣ್ಣಿನ ತಜ್ಞರಾಗಿ ಡಾ. ರಮೇಶ್ ಅಧಿಕಾರ ಸ್ವೀಕರಿಸಿದ್ದಾರೆ.

ಬೆಳ್ತಂಗಡಿ ಕಸಬಾ ಗ್ರಾಮದ ಕಾರಂತ್ಯಾರು ದಿ.ಅಣ್ಣಪ್ಪ ಕುಲಾಲ್ ರವರ ಪುತ್ರರಾದ ಇವರು ಮಂಗಳೂರು ಕಸ್ತೂರ್ಬ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಮುಗಿಸಿ ವೇಣೂರು ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಸಿ ಬಳಿಕ ಉನ್ನತ ಶಿಕ್ಷಣ ಪಡೆದು ಉತ್ತರ ಕನ್ನಡ, ಸಿಗಂದೂರ್, ತುಮಕೂರು, ಚಿಕ್ಕಮಗಳೂರು ಮಲ್ಲೆ ಗೌಡ ಸರಕಾರಿ ಆಸ್ಪತ್ರೆಯಲ್ಲಿ 10 ವರ್ಷ ಕರ್ತವ್ಯ ನಿರ್ವಹಿಸಿ ಇದೀಗ ಬೆಳ್ತಂಗಡಿಗೆ ವರ್ಗಾವಣೆಯಾಗಿ ಬಂದಿರುತ್ತಾರೆ.

ಇವರ ಪತ್ನಿ ಡಾ.ಹೇಮಲತಾ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಡಾ.ರಮೇಶ್ ತಮ್ಮ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಬೆಳ್ತಂಗಡಿ ಸರಕಾರಿ ಶಾಲೆಯಲ್ಲಿ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಮಾಡಿರುತ್ತಾರೆ.

Exit mobile version