ಕಣಿಯೂರು: ನವಚೇತನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಕ್ಕಳಿಗೆ ಪುಸ್ತಕ ವಿತರಣೆ

0

ಕಣಿಯೂರು: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಸ.ಹಿ.ಪ್ರಾ.ಶಾಲೆ ಪಿಲಿಗೂಡುನಲ್ಲಿ ಆ.23ರಂದು ನವಚೇತನ ಚಾರಿಟೇಬಲ್ ಟ್ರಸ್ಟ್ ಫಾರ್ ಡಿಸೇಬಲ್ಸ್ ರವರ ವತಿಯಿಂದ ಸೇವಾ ಭಾರತಿ ಕನ್ಯಾಡಿ ಇವರ ಸಹಯೋಗದೊಂದಿಗೆ ಶಾಲೆಯ 60 ಮಕ್ಕಳಿಗೂ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಇಸ್ಮಾಯಿಲ್ ಹಾಗೂ ರೈತಬಂಧು ರೈಸ್ ಮಿಲ್‌ನ ಮಾಲೀಕ ಶಿವಶಂಕರ್ ನಾಯಕ್, ಶಾಲಾ ಮುಖ್ಯೋಪಾಧ್ಯಾಯಿನಿ ಫ್ಲೇವಿಯ ಡಿಸೋಜಾ ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here