Site icon Suddi Belthangady

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ದನದ ಶವ ಪತ್ತೆ

ಗೇರುಕಟ್ಟೆ: ಆ.24ರಂದು ಬೆಳಗ್ಗಿನ ಜಾವ ಯಾರೋ ಅಕ್ರಮ ದನ ಸಾಗಾಟಗಾರರು ಕಳಿಯ ಗ್ರಾಮದ ಪರಪ್ಪು ಬಸ್ಸು ನಿಲ್ದಾಣದ ಸ್ವಲ್ಪ ಮುಂದೆ ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆ ಬದಿಯಲ್ಲಿ ಸಾಗಾಟ ಮಾಡುವಾಗ ಸತ್ತುಹೋಗಿದ್ದ ದನವನ್ನು ಎಸೆದು ಹೋಗಿದ್ದಾರೆ.

ಈ ಪ್ರದೇಶದಲ್ಲಿ ಅಕ್ರಮ ದನ ಸಾಗಾಟವು ವ್ಯಾಪಕವಾಗಿ ನಡೆಯುತ್ತಿದೆಯೆಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಪೋಲಿಸ್ ಇಲಾಖೆಯು ಕೂಡಲೇ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ವಹಿಸುವಂತೆ ಆಗ್ರಹಿಸುತ್ತಿದ್ದಾರೆ.ಅವ್ಯಾಹತವಾಗಿ ಅಕ್ರಮ ದನ ಸಾಗಾಟ ಮಾಡುತ್ತಿರುವವರನ್ನು ತಡೆಗಟ್ಟುವಂತೆ ಆಗ್ರಹಿಸುತ್ತಿದ್ದಾರೆ.

ವಿಷಯ ತಿಳಿದು ಬೆಳ್ತಂಗಡಿ ಠಾಣಾ ಉಪನಿರೀಕ್ಷಕರಾದ ದನರಾಜ್ ಮಾರ್ಗದರ್ಶನದಂತೆ ಕಳಿಯ ಬೀಟ್ ಪೊಲೀಸರಾದ ಚರಣ್ ಕೂಡಲೇ ಸ್ಥಳ ಪರಿಶೀಲನೆ ನಡೆಸಿದರು.ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್ ಪರಿಮ, ಮರೀಟಾ ಪಿಂಟೋ ಮತ್ತು ಸಾರ್ವಜನಿಕರು ಸ್ಥಳ ಪರಿಶೀಲನೆ ಮಾಡಿದರು.

ಕಳಿಯ ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ಸಂತೋಷ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಸಂಬಂಧಿಸಿದ ಪಶುವೈದ್ಯ ಇಲಾಖೆಗೆ ದೂರು ಸಲ್ಲಿಸಿದರು.

Exit mobile version